ಬಳ್ಳಾರಿ:ವೀ.ವಿ.ಸಂಘದ ವೀರಶೈವ ಮಹಾವಿದ್ಯಾಲಯ, ಬಳ್ಳಾರಿ ರಾಷ್ಟ್ರೀಯ ಸೇವಾ ಯೋಜನೆಯು ಪಂಚಮುಖಿ ಅಭ್ಯುಧಯ ಮಾರ್ಗ ಯೋಜನೆ ಅಡಿಯಲ್ಲಿ ಮಾನವನ ಹಕ್ಕುಗಳು ಮತ್ತು ಕರ್ತವ್ಯಗಳು ಜಾಗೃತಿ ಕಾರ್ಯಕ್ರಮವನ್ನು ವೇಣಿ ವೀರಾಪುರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ಭಾರತದ ಸಂವಿಧಾನದ ಭಾಗವಾದ ಮಾನವನ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲಾಯಿತು. ವಿದ್ಯಾರ್ಥಿಗಳಿಂದ ನಾಮ ಫಲಕಗಳ ಮುಖಾಂತರ ಪ್ರದರ್ಶಿಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ಶರಣಬಸವ ಮತ್ತು ಶ್ರೀಮತಿ.ಭ್ರಮರಾಂಭ.ವೈ ಭಾಗವಹಿಸಿದ್ದರು. ಲಿಂಗಪ್ಪ.ಕೆ, ಉಪನ್ಯಾಸಕರು, ಕುಮಾರಿ ಮಹಲಿಂಗಮ್ಮ , ಉಪನ್ಯಾಸಕರು ರಾಜ್ಯಶಾಸ್ತ್ರ ವಿಭಾಗ ವೀರಶೈವ ಮಹಾವಿದ್ಯಾಲಯ, ಬಳ್ಳಾರಿ ಇವರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ