ಬೆಂಗಳೂರು:ಭರತನಾಟ್ಯ ಪ್ರದರ್ಶನ : ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಆಗಸ್ಟ್ 1, ಗುರುವಾರ ಬೆಳಗ್ಗೆ ಪೂಜಾ ಕಾರ್ಯಕ್ರಮಗಳು, ಅನ್ನದಾನ ಸೇವೆ ಜರುಗಿದವು.
ಸಂಜೆಯ ಕಾರ್ಯಕ್ರಮದಲ್ಲಿ ಅಷ್ಟಾವಧಾನ, ರಥೋತ್ಸವ, ಗಜವಾಹನೋತ್ಸವ, ತೊಟ್ಟಿಲು ಸೇವೆಗಳು ನಡೆದವು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಮಂಜು ಭೈರವಿ ನಿರ್ದೇಶನದಲ್ಲಿ ನಾಟ್ಯ ಭೈರವಿ ಕಲಾ ಕುಟೀರದ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ನಡೆಯಿತು ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ