ಡಾ. ಸುಬ್ರಹ್ಮಣ್ಯ ಭಟ್ಟರ ಮೂರನೇ ಕಾದಂಬರಿ "ಅಚ್ಚಣ್ಣ ಭಟ್ರು" ಬಿಡುಗಡೆ

Upayuktha
0


ಉಜಿರೆ:  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ "ಅಚ್ಚಣ್ಣ ಭಟ್ರು" ವನ್ನು  ಸೆಪ್ಟೆಂಬರ್ 16 ರರಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ. ಸುಬ್ರಹ್ಮಣ್ಯ ಭಟ್ಟರು, ಅವರ ಮಕ್ಕಳಾದ ಅಭಿಗಮ್ಯ ರಾಮ್, ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಉಪಸ್ಥಿತರಿದ್ದರು.


ಇದೇ ಸಂದರ್ಭದಲ್ಲಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ  ಡಾ. ಸತೀಶ್ಚಂದ್ರ ಎಸ್ ರವರು ಶುಭಾಶಯ ತಿಳಿಸಿದರು.


ಕಾದಂಬರಿಗೆ ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರು ಮುನ್ನುಡಿ ಬರೆದಿರುತ್ತಾರೆ. ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top