ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಶ್ವವಿದ್ಯಾನಿಲಯ ಘಟಕವು 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಯನ್ನು ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ ಈ ಮೂರು ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರುಗಳ ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ನವದೆಹಲಿಯ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯ (NAAC) ಅಧ್ಯಕ್ಷರಾದ ಪ್ರೊ. ಅನಿಲ್ ಸಹಸ್ರಬುದ್ಧೆ ಇವರು ಸೆಪ್ಟೆಂಬರ್ 15ರಂದು ಭುವನೇಂದ್ರ ಕಾಲೇಜು ಕಾರ್ಕಳ ಇಲ್ಲಿ ನಡೆಯುವ ಪ್ರೇರಣಾ ದಿವಸ್-2024 ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
2023 ನೇ ಸಾಲಿನಿಂದ ಆರಂಭವಾದ ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಶ್ವವಿದ್ಯಾನಿಲಯ ಘಟಕವು ಶಿಕ್ಷಣ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಪ್ರಾಧ್ಯಾಪಕರನ್ನು ಗುರುತಿಸಿ ಬೇರೆ ಬೇರೆ ವಿಭಾಗಗಳಲ್ಲಿ ಪ್ರಶಸ್ತಿಯನ್ನು ನೀಡುತ್ತಿದೆ. ಅಂತೆಯೇ ಈ ಬಾರಿ ಜೀವಮಾನದ ಸಾಧನೆಗಾಗಿ ಮಂಗಳೂರಿನ ಶಾರದ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ ಪುರಾಣಿಕ್ ಹಾಗೂ ಖ್ಯಾತ ಬರಹಗಾರರು ಹಾಗೂ ಶಿಕ್ಷಣ ತಜ್ಞ ಡಾ. ಶಂಕರ್ ರಾವ್ ಮಂಗಳೂರು ಇವರನ್ನು ಆಯ್ಕೆ ಮಾಡಲಾಗಿದೆ.
ಕಾಲೇಜು ಆಡಳಿತ ನಿರ್ವಹಣೆಯಲ್ಲಿನ ಸಾಧನೆಗಾಗಿ ಅತ್ಯುತ್ತಮ ಆಡಳಿತ ನಿರ್ವಾಹಕರಾಗಿ ಮಂಗಳೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಜಗದೀಶ್ ಬಾಳ ಹಾಗೂ ಹಾಗೂ ಎಸ್ ಡಿ ಎಂ ಸ್ವಾಯತ್ತ ಕಾಲೇಜು ಉಜಿರೆಯ ಪ್ರಾಂಶುಪಾಲರಾದ ಡಾ. ಬಿ ಎ ಕುಮಾರ ಹೆಗ್ಡೆ ಇವರನ್ನು ಆಯ್ಕೆ ಮಾಡಲಾಗಿದೆ.
ಸಂಶೋಧನ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಶಿಕ್ಷಕರನ್ನು ಗುರುತಿಸುವ ನಿಟ್ಟಿನಲ್ಲಿ ಈ ಬಾರಿ ಅತ್ಯುತ್ತಮ ಸಂಶೋಧಕ ಪ್ರಶಸ್ತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಪ್ರೊ. ವಿಶಾಲಾಕ್ಷಿ ಅವರನ್ನು ಆಯ್ಕೆ ಮಾಡಲಾಗಿದೆ.
ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಾಗಿ ಪ್ರಾಂಶುಪಾಲರು, ಶ್ರೀ ಭುವನೇಂದ್ರ ಕಾಲೇಜು ಕಾರ್ಕಳದ ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್ ಹಾಗೂ ಕಾವೇರಿ ಕಾಲೇಜು ವಿರಾಜಪೇಟೆಯ ನಿವೃತ್ತ ಪ್ರಾಂಶುಪಾಲ ಡಾ. ಆನಂದ ಕಾರ್ಲಾ ಇವರನ್ನು ಆಯ್ಕೆ ಮಾಡಲಾಗಿದೆ.
ಅತ್ಯುತ್ತಮ ಗ್ರಂಥಪಾಲಕ ವಿಭಾಗದಲ್ಲಿ ಡಾ. ವಾಸಪ್ಪ ಗೌಡ, ಗ್ರಂಥಪಾಲಕರು, ಬೆಸೆಂಟ್ ಸಂಧ್ಯಾ ಕಾಲೇಜು ಮಂಗಳೂರು ಹಾಗೂ ಅತ್ಯುತ್ತಮ ದೈಹಿಕ ಶಿಕ್ಷಣ ಶಿಕ್ಷಕರು ಪ್ರಶಸ್ತಿಗಾಗಿ ಕೆ. ಶಂಕರನಾರಾಯಣ ದೈಹಿಕ ಶಿಕ್ಷಕರು, ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇವರನ್ನು ಆಯ್ಕೆ ಮಾಡಲಾಗಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ