ಅಯೋಧ್ಯೆ: ರಾಮ ತಾರಕ ಯಜ್ಞ ಸಪ್ತಾಹ ಸಂಪನ್ನ

Upayuktha
0


ಅಯೋಧ್ಯೆ: ಪಿತೃಪಕ್ಷದ ಸಂದರ್ಭದಲ್ಲಿ ಲೋಕಕಲ್ಯಾಣದ ಸಂಕಲ್ಪವನ್ನಿಟ್ಟುಕೊಂಡು ಅಯೋಧ್ಯೆಯ ರಾಮ‌ಜನ್ಮಭೂಮಿಯಲ್ಲಿ ವೈದಿಕರ ಮುಖೇನ ತಾವು  ನಡೆಸಿದ ರಾಮತಾರಕ ಯಜ್ಞ ಸಪ್ತಾಹವು ಗುರುವಾರ ನವಮೀ ತಿಥಿ ಪುನರ್ವಸು ನಕ್ಷತ್ರದ ದಿನದಂದೇ ಸಂಪನ್ನಗೊಂಡಿದೆ ಎಂದು ರಾಮಮಂದಿರ ಟ್ರಸ್ಟ್ ವಿಶ್ವಸ್ತರಾದ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.


ಗುರುವಾರ ಅಯೋಧ್ಯೆ ರಾಮಮಂದಿರದ ಯಾಗಶಾಲೆಯಲ್ಲಿ ಒಂದು ವಾರ ನಡೆದ ರಾಮತಾರಕ ಯಜ್ಞ ಪೂರ್ಣಾಹುತಿಯ ನಂತರ ಈ ಸಂದೇಶ ನೀಡಿದ್ದಾರೆ.

 


ಪೂರ್ಣಾಹುತಿ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್, ವಿಹಿಂಪ ರಾಷ್ಟ್ರೀಯ ಮುಖಂಡ ಗೋಪಾಲ್ ಜಿ, ಮಂದಿರದ ಅರ್ಚಕ ಪ್ರಮುಖರು, ಶ್ರೀಗಳ ಆಪ್ತ ಕೃಷ್ಣಮೂರ್ತಿ ಭಟ್, ಮೊದಲಾದವರಿದ್ದರು. ವಿದ್ವಾನ್ ಶಶಾಂಕ್ ಭಟ್ಟರು ಯಾಗ ನೆರವೇರಿಸಿದರು. ಶ್ರೀಶ ಭಟ್ ರವಿರಾಜ್, ಅಯೋಧ್ಯೆ ಪೇಜಾವರ ಮಠದ ವ್ಯವಸ್ಥಾಪಕ ಮಹೇಂದ್ರ ದುಬೆ ಮೊದಲಾದವರು ಸಹಕರಿಸಿದರು.‌


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top