ಅನೇಕ ಕಡೆಗಳಲ್ಲಿ ಗಣೇಶಭಕ್ತರು ಅತ್ಯಂತ ಶ್ರದ್ಧೆ ಭಕ್ತಿಯಿಂದ ತಮ್ಮ ತಮ್ಮ ಮನೆಗಳಲ್ಲಿ ಪ್ರಸಾದದ ತಯಾರಿ ಮಾಡಿ ಅದನ್ನು ಪೆಂಡಾಲುಗಳಲ್ಲಿ ಇತರರಿಗೆ ಹಂಚುತ್ತಾರೆ. ಹೀಗಿರುವಾಗ ಅಂಥವರು FSSAI ಸರ್ಟಿಫಿಕೇಟ್ ಎಲ್ಲಿಂದ ತರಬೇಕು ? ಇಫ್ತಾರ್ ಮತ್ತಿತರ ಸಂದರ್ಭದಲ್ಲಿ ಅಕ್ರಮವಾಗಿ ರಸ್ತೆ ಮಧ್ಯದಲ್ಲಿಯೇ ಅಡುಗೆ ಮಾಡಿ ವಿತರಣೆ ಮಾಡಲಾಗುತ್ತದೆ. ಇದರ ಗುಣಮಟ್ಟ ಪರಿಶೀಲನೆ ಬಗ್ಗೆ ಬಿಬಿಎಂಪಿ ಎಂದಾದರೂ ಪ್ರಶ್ನಿಸುವುದೇ ? ಅನೇಕ ವರ್ಷಗಳಿಂದ ಹಿಂದೂ ಸಮಾಜ ಈ ಪ್ರಸಾದ ಸೇವೆ ಮಾಡುತ್ತಾ ಬಂದಿದೆ, ಇದುವರೆಗೆ ಇದರ ಬಗ್ಗೆ ಹಿಂದೂ ಸಮಾಜದಲ್ಲಿ ಯಾವುದೇ ಆಕ್ಷೇಪವಿಲ್ಲದಿರುವಾಗ ಬಿಬಿಎಂಪಿಗೆ ಇದರಲ್ಲಿ ಮೂಗು ತೂರಿಸುವ ಆವಶ್ಯಕತೆ ಏನಿದೆ ? ಕೇವಲ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಇಂತಹ ಧೋರಣೆಗಳನ್ನು ತಂದು ಕಾಂಗ್ರೆಸ್ ಪನಃ ತನ್ನ ಹಿಂದೂದ್ವೇಷವನ್ನು ಎತ್ತಿ ಹಿಡಿದಿದ್ದಲ್ಲದೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನು ಹಿಂದೂ ಸಮಾಜ ಎಂದಿಗೂ ಸಹಿಸುವುದಿಲ್ಲ !
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ