ಭದ್ರಾವತಿ: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ಶಿವಮೊಗ್ಗ, ಜಿಲ್ಲಾ ಭದ್ರಾವತಿ ತಾಲೂಕು ಪತ್ರಿಕಾ ವಿತರಕರ ವತಿಯಿಂದ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಹಾಗೂ ನಾಲ್ಕನೇ ರಾಜ್ಯ ಸಮ್ಮೇಳನದ ಪತ್ರಿಕೆ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು.
ನಂತರ ಸಭೆ ಸೇರಿ ಹೊಸದಾಗಿ ಭದ್ರಾವತಿ ತಾಲೂಕು ಘಟಕವನ್ನು ಜಿಲ್ಲಾಧ್ಯಕ್ಷರಾದ ಎನ್.ಮಾಲತೇಶ್, ಪ್ರಧಾನ ಕಾರ್ಯದರ್ಶಿಯಾದ ಮುಕ್ತಾರ್ ಅಹಮದ್ (ನಜೀರ್) ರವರ ಸಮ್ಮುಖದಲ್ಲಿ ನಿರ್ದೇಶಕರ ಮಂಡಳಿಯ ರಚನೆ ಮಾಡಲಾಯಿತು. ಹೊಸ ಕಾರ್ಯಕಾರಿ ಮಂಡಳಿಯಲ್ಲಿ ಅಧ್ಯಕ್ಷರಾಗಿ ಜಿ.ಐ. ಮಲ್ಲಿಕಾರ್ಜುನ್, ಉಪಾಧ್ಯಕ್ಷರಾಗಿ ಸೋಮಶೇಖರ್, ಕಾರ್ಯದರ್ಶಿಯಾಗಿ ಪರಶುರಾಮ್ ರಾವ್, ಸಹ ಕಾರ್ಯದರ್ಶಿಯಾಗಿ ಶಿವ ಮೂರ್ತಿ.ಈ, ಖಜಾಂಚಿಯಾಗಿ ಮಧು.ಟಿ, ನಿರ್ದೇಶಕರುಗಳಾಗಿ ಕೆಂಪೇಗೌಡ ಲೋಕೇಶ್.ಕೆ, ದೇವೇಂದ್ರಪ್ಪ, ಕೃಷ್ಣಮೂರ್ತಿಯವರುಗಳು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಭದ್ರಾವತಿಯ ವಿತರಕರಾದ ಜಗದೀಶ್, ಶಬ್ಬೀರ್ ಮುಂತಾದವರು ಪಾಲ್ಗೊಂಡಿದ್ದರು. ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಹೊಸದಾಗಿ ರಚನೆಯಾಗಿರುವ ಕಾರ್ಯಕ್ರಮ ಮಂಡಳಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ