ಮೂಡುಬಿದಿರೆ: ಕಲೆ ಜೀವನದ ಮೆರುಗನ್ನು ಹೆಚ್ಚಿಸಿ ಬದುಕನ್ನು ಶ್ರೀಮಂತಗೊಳಿಸುತ್ತದೆ. ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ವಿಪುಲವಾದ ಅವಕಾಶಗಳಿದ್ದು ಅದನ್ನು ಬಳಸಿಕೊಂಡು ಯಶಸ್ವಿಯಾಗಬೇಕು ಎಂದು ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಬಾಲಕೃಷ್ಣ ಶೆಟ್ಟಿ ಕರೆ ನೀಡಿದರು.ಆಳ್ವಾಸ್ ಪದವಿ-ಪೂರ್ವ ಕಾಲೇಜಿನ ಕಲಾ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೋಷಕರ ಮೊಗದಲ್ಲಿ ನಗು ಮೂಡಿಸುವ ಕೆಲಸವನ್ನು ಮಕ್ಕಳು ಮಾಡಬೇಕು ಎಂದರು.
ಕರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್ ಮಾತನಾಡಿ, ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗವಕಾಶಗಳಿವೆ. ಇಂದು ವಿಜ್ಞಾನ, ವಾಣಿಜ್ಯ ಪದವೀಧರರು ನಿಮ್ಮೊಂದಿಗೆ ಸ್ಪರ್ಧೆಯಲ್ಲಿದ್ದಾರೆ. ಸರಕಾರಿ ಸ್ವಾಮ್ಯದ ಎಲ್ಲಾ ಉದ್ಯೋಗಳಲ್ಲೂ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶವಿದೆ. ವಿಜ್ಞಾನ ಕಲಿತ ವಿದ್ಯಾರ್ಥಿಗಳು ಡಾಕ್ಟರಗಳಾಗಬಹುದು, ಇಲ್ಲವೇ ಇಂಜಿನಿಯರ್ಗಳಾಗಬಹುದು. ಆದರೆ ಸಮಾಜದಲ್ಲಿ ಹೆಚ್ಚು ಗೌರವಿಸಲ್ಪಡುವವರು ಐಎಎಸ್, ಐಪಿಎಸ್ ಹುದ್ದೆಯಲ್ಲಿರುವವರು.
ತಮ್ಮಲ್ಲಿರುವ ಕೀಳರಿಮೆಯನ್ನು ವಿದ್ಯಾರ್ಥಿಗಳು ಹೋಗಲಾಡಿಸಬೇಕು. ನಿರಂತರ ಪ್ರಯತ್ನದಿಂದ ಯಶಸ್ಸನ್ನು ಪಡೆಯಬಹುದು ಎಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಜೀವನ್ರಾಂ ಸುಳ್ಯ ಮಾತನಾಡಿ, ನಿರಂತರ ದುಡಿಮೆ ಮತ್ತು ಕಾಲದ ಮಹತ್ವವನ್ನು ಅರಿತುಕೊಂಡಾಗ ಯಶಸ್ಸು ನಮ್ಮದಾಗುತ್ತದೆ. ಕಳೆದ ಸಮಯ ಮತ್ತೆ ಯಾರಿಗೂ ಮರಳಿ ಬರಲಾರದು. ವಿಜ್ಞಾನದ ವಿದ್ಯಾರ್ಥಿಗಳೆಂದರೆ ಬುದ್ದಿವಂತರು, ಕಲಾ ವಿಭಾಗದ ವಿದ್ಯಾರ್ಥಿಗಳೆಂದರೆ ದಡ್ಡರು ಎಂಬ ಸರಳ ಮಾತು ಪ್ರಚಲಿತದಲ್ಲಿದೆ. ಇದು ಸಲ್ಲದು. ಸಾಮಾನ್ಯವಾಗಿ ವಿಜ್ಞಾನದ ವಿದ್ಯಾರ್ಥಿಗಳಲ್ಲಿ ಒತ್ತಡದ ಮನೋಭಾವವಿರುತ್ತದೆ. ಆದರೆ ಕಲಾ ವಿಭಾಗದ ವಿದ್ಯಾರ್ಥಿಗಳು ಸಂತೋಷದಿಂದ ಕಲಿಕೆಯಲ್ಲಿ ತೊಡಿಸಿಕೊಳ್ಳುವ ಮೂಲಕ ಬದುಕನ್ನು ಒತ್ತಡ ರಹಿತವಾಗಿ ರೂಪಿಸಿಕೊಳ್ಳಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ, ಕಲಾ ವಿಭಾಗದ ವಿದ್ಯಾರ್ಥಿಗಳು ತಮ್ಮ ವಿಷಯದ ವಿಶಾಲತೆ ಹಾಗೂ ವೈವಿಧ್ಯತೆಯನ್ನು ಅರಿತುಕೊಳ್ಳಬೇಕು. ಮನುಷ್ಯ ಒಂಟಿಯಾಗಿ ಬದುಕಲಾರ ಅವನು ಸಮಾಜದೊಂದಿಗೆ ಬದುಕುವುದು ಅನಿವರ್ಯ. ಮಾನವೀಯ ಅಂತಃಕರಣ, ಪ್ರೀತಿ- ವಿಶ್ವಾಸ, ನಂಬಿಕೆಗಳು ಮೇಳೈಹಿಸಿದರೆ ಮನುಷ್ಯ ನಿಜವಾದ ಮಾನವನಾಗುತ್ತಾನೆ. ವಿದ್ಯಾರ್ಥಿಗಳು ಓದು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ನಿಮ್ಮನ್ನು ನೀವು ಅರಿತುಕೊಳ್ಳುವ ಮೂಲಕ ಬದುಕಿನಲ್ಲಿ ಯಶಸ್ಸನ್ನು ಕಾಣಿರಿ ಎಂದು ಶುಭಹಾರೈಸಿದರು.
ಕಲಾ ವಿಭಾಗದ ಸಂಯೋಜಕ ದಾಮೋದರ ಇದ್ದರು. ವಿದ್ಯಾರ್ಥಿನಿ ಬೋರಮ್ಮ ಸ್ವಾಗತಿಸಿ, ಸ್ಪೂರ್ತಿ ಅತಿಥಿಗಳನ್ನು ಪರಿಚಯಿಸಿ, ರಕ್ಷಿತಾ ಸಂವಿಧಾನ ಪೀಠಿಕೆಯನ್ನು ಬೋಧಿಸಿ, ಚಿನ್ಮಯಿ ಕಾರ್ಯಕ್ರಮ ನಿರ್ವಹಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ