ಪುತ್ತೂರು:ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಅಂಬಿಕಾ ವಿದ್ಯಾಲಯದ ಮೂವರಿಗೆ ಪ್ರಥಮ ಸ್ಥಾನ

Upayuktha
0


ಪುತ್ತೂರು:
ದಕ್ಷಿಣ ಕನ್ನಡದ ಪಿಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಗುರುವಾರ ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಿದ ರಸಾಯನಶಾಸ್ತ್ರ ವಿಷಯ ಸಂಬಂಧಿ ವಿವಿಧ ಸ್ಪರ್ಧೆಗಳಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್  ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಲವು ಬಹುಮಾನ ಗಳಿಸಿದ್ದಾರೆ. ಪುತ್ತೂರು ಕರ್ಕುಂಜದ ಬಿ ಕೆ ಸುರೇಶ್ ಮತ್ತು ಜಯಂತಿ ಎಸ್ ದಂಪತಿಯ ಪುತ್ರಿ ಕೆ ಎಸ್ ಮನೀಷಾ ‘ಇಂಟರ್ಯಾಕ್ಟಿವ್  ಕೆಮಿಸ್ಟ್ರಿ’ಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. 


ವಿಟ್ಲದ ಜಗದೀಶ್ ವಿ ಮತ್ತು ಸಂಗೀತಾ ದಂಪತಿಯ ಪುತ್ರ ಚಿನ್ಮಯ್ ವಿ ಜೆ ಡಾಕ್ಯುಮೆಂಟರಿ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಪುತ್ತೂರು ದರ್ಬೆಯ ಶಿವರಾಮ್ ಆಳ್ವ ಮತ್ತು ಸೀಮಾ ಆಳ್ವ ದಂಪತಿಯ ಪುತ್ರಿ ವರ್ಷಿಣಿ ಆಳ್ವ ಮತ್ತು ಸುಬ್ರಹ್ಮಣ್ಯದ ಕೆ ಸತೀಶ ಕಲ್ಲೂರಾಯ ಮತ್ತು ರೇಣುಕಾ ದಂಪತಿಯ ಪುತ್ರಿ ಧನ್ಯಶ್ರೀ ಕೆ ‘ಕೆಮ್ ರಂಗೋಲಿ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಈ ಸ್ಪರ್ಧೆಯಲ್ಲಿ ದ ಕ ಜಿಲ್ಲೆಯ 30 ವಿವಿಧ ಸಂಸ್ಥೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top