ಸುರತ್ಕಲ್: ಪದವಿಯ ಜೊತೆಗೆ ವಿದ್ಯಾರ್ಥಿಗಳಿಗೆ ಅನೇಕ ರೀತಿಯ ಆಧುನಿಕ ಉದ್ಯೋಗಾವಕಾಶಗಳು ಲಭ್ಯವಿದ್ದು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿ ಯುವ ಜನಾಂಗ ತಮ್ಮ ಬದುಕನ್ನು ಸೊಗಸಾಗಿ ರೂಪಿಸಬಹುದು. ವಿದ್ಯಾರ್ಥಿಗಳು ನಾಗರಿಕ ವಿಮಾನಯಾನದ ತರಬೇತಿಯನ್ನು ಪಡೆದು ಅದರಲ್ಲಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್ಜಿ . ಅಮೀನ್ ಅವರು ತಿಳಿಸಿದರು.
ಅವರು ಹಿಂದೂ ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್ನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು, ಸುರತ್ಕಲ್ನ ಆಂತರಿಕ ಗುಣಮಟ್ಟ ಖಾತರಿ ಕೋಶ, ಮಾನವಿಕ ಸಂಘ, ಎನ್.ಸಿ.ಸಿ, ಮಹಿಳಾ ವೇದಿಕೆ ಮತ್ತು ಗ್ರಾಹಕರ ವೇದಿಕೆ ಜಂಟಿಯಾಗಿ ಆಯೋಜಿದ “ನಾಗರಿಕ ವಿಮಾನ ಯಾನ – ಒಂದು ಒಳನೋಟ” ಎಂಬ ತರಬೇತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ ಪ್ರಸಕ್ತ ಸಂದರ್ಭದಲ್ಲಿ ಉತ್ತಮ ಅವಕಾಶಗಳಲ್ಲಿ ಕೌಶಲ್ಯಗಳನ್ನು ಗಳಿಸಿ ಉನ್ನತ ಸಾಧನೆ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಬಿ.ಎ. ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ವೇತನ ನೀಡುವ ಸಲುವಾಗಿ ಪ್ರೀತಿ ಅಮೀನ್ ಮತ್ತು ಸುಧೀರ್ ಜಿ. ಅಮೀನ್ ರೂ. 48,000.00 ಮೌಲ್ಯದ ಚೆಕ್ನ್ನು ಪ್ರಾಂಶುಪಾಲರಿಗೆ ಹಸ್ತಾಂತರಿಸಿದರು.
ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ. ಹರೀಶ ಆಚಾರ್ಯ ಪಿ. ಸ್ವಾಗತಿಸಿದರು. ಎನ್.ಸಿ.ಸಿ ಅಧಿಕಾರಿ ಕ್ಯಾ.ಡಾ. ಸುಧಾ ಯು. ವಂದಿಸಿದರು. ಎನ್.ಸಿ.ಸಿ ಕೆಡೆಟ್ ಧನ್ಯಶ್ರೀ ರಾವ್ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ವೇದಿಕೆಯ ಸಂಯೋಜಕಿ ದಯಾ ಸುವರ್ಣ ಮತ್ತು ಶ್ರೀದೇವಿ ಕಾರ್ಯಕ್ರಮ ಸಂಯೋಜಿಸಿದರು. ಉಪನ್ಯಾಸಕಿಯರಾದ ಡಾ. ವಿಜಯಲಕ್ಷ್ಮೀ, ರಶ್ಮಿ ಕಾಯರ್ಮಾರ್ ಉಪಸ್ಥಿತರಿದ್ದರು. ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ