ಬದುಕುವ ಕಲೆ ಕಲಿಸುವ ಮಾರ್ಗದರ್ಶಕರ ದಿನ: ಸುಧಾಕರ ರಾವ್ ಪೇಜಾವರ

Upayuktha
0


ಸುರತ್ಕಲ್: ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆಯುಲ್ಲಿ ಶಿಕ್ಷಕ ರಕ್ಷಕ ಸಂಘದ ವತಿಯಿಂದ ಶಾಲಾ ವಜ್ರ ಮಹೋತ್ಸವ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಗುರುವಂದನ ಕಾರ್ಯಕ್ರಮ ಏರ್ಪಡಿಸಲಾಯಿತು.


ಈ ಸಂದರ್ಭದಲ್ಲಿ ವಿದ್ಯಾದಾಯಿನೀ ಪ್ರೌಢ ಶಾಲೆಯ ನಿವೃತ್ತ ಚಿತ್ರ ಕಲಾ ಶಿಕ್ಷಕಿ ಶ್ರೀಮತಿ ಕೆ ಮನೋರಂಜನಿ ರಾವ್ ಇವರನ್ನು ವೇದಿಕೆಯಲ್ಲಿರುವ ಗಣ್ಯರು ಶಾಲು ಹೊದಿಸಿ ಫಲಪುಷ್ಪ ಹಾಗೂ ಹೂಗುಚ್ಛ ನೀಡಿ ಗೌರವಿಸಲಾಯಿತು.


ಶಿಕ್ಷಕ ಸಮ್ಮಾನ ಸ್ವೀಕರಿಸಿ ಇವರು ರಕ್ಷಕ- ಶಿಕ್ಷಕ ಸಂಘದ ಪ್ರೀತಿ, ವಿಶ್ವಾಸ ಹಾಗೂ ಗೌರವಗಳಿಗೆ ನಾವು ಸದಾ ಚಿರಋಣಿ ಎನ್ನುತ್ತಾ, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ಬೆಳೆಸಿಕೊಂಡು ಸಮಾಜದ ಆಸ್ತಿಯಾಗಬೇಕೆಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿಂದು ವಿದ್ಯಾದಾಯಿನೀ ಸಂಘದ ಕಾರ್ಯದರ್ಶಿ ಎಚ್  ಶ್ರೀರಂಗ ಇವರು ಗುರು ಶಿಷ್ಯರ ಸಂಬಂಧದ ಮಹತ್ವವನ್ನು ವಿವರಿಸಿ, ಶಿಕ್ಷಕರ ದಿನಾಚರಣೆಯನ್ನು ಆಚರಿಸುವುದರಿಂದ ವಿದ್ಯಾರ್ಥಿಗಳಲ್ಲಿ ಗುರು ಹಿರಿಯರಿಗೆ ಗೌರವಿಸುವ ಮನೋಭಾವನೆ ಬೆಳೆಯಲು ಸಾಧ್ಯ. ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡು ಅಧ್ಯಾಪಕರ ಮೆಚ್ಚುಗೆಯನ್ನುಗಳಿಸಿ ಮಕ್ಕಳು ಮೌಲ್ಯಯುತ ಶಿಕ್ಷಣವನ್ನು ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಶುಭ ಹಾರೈಸಿದರು.


ಸಭಾಧ್ಯಕ್ಷತೆಯನ್ನು ಶಾಲಾ ಸಂಚಾಲಕ ಸುಧಾಕರರಾವ್ ಪೇಜಾವರ್ ವಹಿಸಿದ್ದು, ಇಂದು ಆದರ್ಶ ವ್ಯಕ್ತಿಗಳನ್ನು ರೂಪಿಸುವ ಹಾಗೂ ಬದುಕುವ ಕಲೆ ಕಲಿಸುವ ಮಾರ್ಗದರ್ಶಕರ ದಿನ ಎಂದು ಗುರುವಂದನಾ ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವವನ್ನು ತಿಳಿಸಿದರು.


ಶಾಲಾ ಮುಖ್ಯೋಪಾಧ್ಯಾಯ ಬಾಲಚಂದ್ರ ಕೆ. ಸ್ವಾಗತಿಸಿದರು. ರಕ್ಷಕ ಶಿಕ್ಷಕ ಸಂಘದ ಗೌರವಾಧ್ಯಕ್ಷ ಗಂಗಾಧರ ಪೂಜಾರಿಯವರು ಪ್ರಾಸ್ತಾವಿಕ ಭಾಷಣ ಮಾಡಿದರು. ವೇದಿಕೆಯಲ್ಲಿ ಬೈಕಂಪಾಡಿ ಯೂನಿಯನ್ ಯೂನಿಯನ್ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಮಹೇಶ್, ಶಿಕ್ಷಕ ರಕ್ಷಕ ಸಂಘದ ಗೌರವಾಧ್ಯಕ್ಷ ರಘುರಾಮ ರಾವ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಜಯ  ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಪ್ರೌಢ ಶಾಲೆಯ ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರಿಗೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಜಯ ಮತ್ತು ಪೋಷಕರು ಒಟ್ಟು ಸೇರಿ ವಿದ್ಯಾರ್ಥಿಗಳ ಮೂಲಕ ಗುರುವಂದನಾ ಕಾರ್ಯಕ್ರಮ ನಡೆಸಿಕೊಟ್ಟರು. ಶಾಲಾ ವಿದ್ಯಾರ್ಥಿಗಳಾದ -ಈಶ್ವರಿ 9B ಹಾಗೂ ಸುನಿಲ್  9A  ಇವರು ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು.


ಕಾರ್ಯಕ್ರಮದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿನಿ ಕುಮಾರಿ ಸರೋಜಾ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸದಸ್ಯೆ ಶ್ರೀಮತಿ ಪದ್ಮ ಶ್ರೀಹರಿ ಇವರು ಧನ್ಯವಾದ ಗೈದರು. ಎಲ್ಲಾ ಶಿಕ್ಷಕ-ಶಿಕ್ಷಕೇತರರು, ಶಿಕ್ಷಕ ರಕ್ಷಕ ಶಿಕ್ಷಕ ಸಂಘದ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top