ಉಡುಪಿ: ಕೃಷ್ಣನ ಸನ್ನಿಧಿಯಲ್ಲಿ ರಾಗರತ್ನ ಮಾಲಿಕೆ-27 ಸಂಪನ್ನ

Upayuktha
0


ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠ ಉಡುಪಿ, ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು, ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ ರಾಗ ಧನ ಉಡುಪಿ ಸಂಸ್ಥೆಯ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸಂಗೀತ ಕಾರ್ಯಕ್ರಮ 'ರಾಗರತ್ನ ಮಾಲಿಕೆ- 27' ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಆಗಸ್ಟ್ 31ರಂದು ಶನಿವಾರ ಸಂಜೆ 7 ಗಂಟೆಗೆ ಉಡುಪಿಯ ರಾಜಾಂಗಣದಲ್ಲಿ ನಡೆಯಿತು.


ಬೆಂಗಳೂರಿನ ಈಶ್ವರ ಅಯ್ಯರ್ ಅವರ ಹಾಡುಗಾರಿಕೆಗೆ ಪೃಥ್ವಿ ಭಾಸ್ಕರ್ ವಯೊಲಿನ್, ಪವನ್ ಮಾಧವ್ ಮಾಸೂರ್ ಮೃದಂಗದಲ್ಲಿ ಸಾಥ್ ನೀಡಿದರು. ರಾಗ ಧನ ಉಡುಪಿ ಇದರ ಕಾರ್ಯದರ್ಶಿ ಉಮಾಶಂಕರಿ ಸಹಕರಿಸಿದರು. ರಾಘವೇಂದ್ರ ಆಚಾರ್ಯ ಅವರು ಪ್ರಾರ್ಥಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top