ಧರ್ಮಸ್ಥಳ: ಪುರಾಣ ವಾಚನ-ಪ್ರವಚನ ಸಮಾರೋಪ

Upayuktha
0 minute read
0




ಉಜಿರೆ:
ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಎರಡು ತಿಂಗಳ ಕಾಲ ನಡೆದ ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಸೋಮವಾರ ಮುಕ್ತಾಯಗೊಂಡಿತು.

ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ 6ರಿಂದ ರಾತ್ರಿ ಗಂಟೆ 8 ರ ವರೆಗೆ ನಡೆದ ಕಾರ್ಯಕ್ರಮದಲ್ಲಿ ಊರಿನ ನಾಗರಿಕರು ಹಾಗೂ ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ಕೂಡಾ ಕಾರ್ಯಕ್ರಮದ ಸೊಗಡನ್ನು ಆಸ್ವಾದಿಸಿ ಪುಣ್ಯಸಂಚಯ ಮಾಡಿಕೊಂಡರು.


ಎರಡು ತಿಂಗಳು ನಡೆದ ಪುರಾಣ ವಾಚನದಲ್ಲಿ14 ಮಂದಿ ಹಾಗೂ ಪ್ರವಚನದಲ್ಲಿ 20 ಮಂದಿ ವಿದ್ವಾಂಸರು ಭಾಗವಹಿಸಿದರು.ಸೋಮವಾರ ಕುಮಾರಿ ಸುಪ್ರೀತಾ ಕೋರ್ನಾಯ ವಾಚನ ಮಾಡಿದರೆ ಅಶೋಕ ಭಟ್ ಪ್ರವಚನ ನೀಡಿದರು.


ಸಮಾರೋಪ ಸಮಾರಂಭದಲ್ಲಿ ಹೆಗ್ಗಡೆಯವರು ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ  ಎಲ್ಲರನ್ನೂ ಗೌರವಿಸಿ ಅಭಿನಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
To Top