ಉಜಿರೆ: ಎಸ್‌ಡಿಎಂ ಡಿಇಎಲ್‌ಇಡಿ ಸಂಸ್ಥೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Upayuktha
0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ (ಡಿ.ಇಎಲ್.ಇಡಿ) ಸಂಸ್ಥೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಎಸ್‌ಡಿಎಂ ಸನಿವಾಸ ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಮಾತನಾಡುತ್ತಾ, ಜೀವನ ಕೌಶಲಗಳು ಮಾನವನ ಜೀವನದಲ್ಲಿ ಅತ್ಯಂತ ಮಹತ್ವದ್ದಾಗಿರುತ್ತವೆ. ಅವು ನಮ್ಮ ಸಾಮರ್ಥ್ಯವನ್ನು ಹೆಚ್ಚಿಸುವುದರೊಂದಿಗೆ ಸಂಬಂಧಗಳನ್ನು ಬೆಳೆಸುತ್ತವೆ ಮತ್ತು ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯಗಳನ್ನು ನೀಡುತ್ತವೆ. ಹಾಗಾಗಿ ಜೀವನ ಕೌಶಲ್ಯಗಳು ಮಾನವನ ವ್ಯಕ್ತಿತ್ವದ ಮೇಲೆ ಪ್ರಭಾವವನ್ನು ಬೀರುತ್ತದೆ. ಸಹಕಾರ, ಸಾಮರ್ಥ್ಯ, ಸಹನೆ, ಸಂಘಟನೆ, ಸ್ವ ಅಧ್ಯಾಯ ಈ ಎಲ್ಲಾ ಗುಣಗಳು ಜೀವನದ  ಕ್ಷೇತ್ರಗಳಲ್ಲಿ ಪ್ರಮುಖವಾಗಿವೆ ಹಾಗಾಗಿ ಶಿಕ್ಷಕರಾದ ನೀವು ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಂಡು ಮಕ್ಕಳಿಗೆ ಮಾದರಿ ಶಿಕ್ಷಕರಾಗಿ ಎಂದು ಶುಭ ಹಾರೈಸಿದರು.


ವಿದ್ಯಾರ್ಥಿಗಳಿಗೆ ಕಾರ್ಯಾಗಾರದಲ್ಲಿ ಹಲವಾರು ಪ್ರಾಯೋಗಿಕ ಚಟುವಟಿಕೆಗಳನ್ನು ಮಾಡಿಸಲಾಯಿತು. ಪ್ರಾಂಶುಪಾಲರಾದ ಸ್ವಾಮಿ ಕೆ.ಎ. ಅಧ್ಯಕ್ಷತೆ ವಹಿಸಿ, ವ್ಯಕ್ತಿಯು ಜೀವನ ಕೌಶಲ್ಯ ಅಥವಾ ಮಾನಸಿಕ ಸಾಮರ್ಥ್ಯದ ಸಹಾಯದಿಂದ ಕಷ್ಟಕರವಾದ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಕಲಿಯಬಹುದು ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಮಂಜು ಆರ್, ಪ್ರಿಯದರ್ಶಿನಿ, ಸಿಬ್ಬಂದಿ ವರ್ಗದವರು ಮತ್ತು ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಪ್ರಶಿಕ್ಷಣಾರ್ಥಿಗಳಾದ ಅಂಬಿಕಾ ಮತ್ತು ಅನುಷಾ ಪ್ರಾರ್ಥಿಸಿ, ಅನುಷಾ ಸ್ವಾಗತಿಸಿ, ಮುಝೈನಾ ವಂದಿಸಿ, ಫಾತಿಮಾ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top