ಪುತ್ತೂರು: ತಾಲೂಕು ಮಟ್ಟದ ವಾಲಿಬಾಲ್​ ಪಂದ್ಯಾಟ- ವಿಸಿ ಬಾಲಕರ ತಂಡ ಪ್ರಥಮ

Chandrashekhara Kulamarva
0




ಪುತ್ತೂರು: 
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ನರೇಂದ್ರ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್​ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.


ತಂಡದಲ್ಲಿ ಪ್ರಥಮ ಪಿಯುಸಿಯ ಜಿತೇಶ್​. ಸಿ, ಹೇಮಂತ್​. ಆರ್​. ಗೌಡ, ಅಕ್ಷಯ್​. ಬಿ, ಸಿಂಚನ್​. ಕೆ.ಎ., ಸಾತ್ವಿಕ್​ ಶೆಟ್ಟಿ ಹಾಗೂ ದ್ವಿತೀಯ ಪಿಯುಸಿಯ ಧ್ಯಾನೇಶ್​, ಸಂದೇಶ್​, ಹಿತೇಶ್​.ಪಿ, ಸುಶಾಂತ್​ ಅಂಚನ್​, ವಹಿನ್​ ಭಾಗವಹಿಸಿದ್ದರು. ಈ ಪಂದ್ಯಾಟದಲ್ಲಿ ಪ್ರಥಮ ಪಿಯುಸಿಯ ಹೇಮಂತ್​.ಆರ್​. ಗೌಡ ಉತ್ತಮ ಪಾಸ್ಸರ್​ ಪ್ರಶಸ್ತಿ ಹಾಗೂ ದ್ವಿತೀಯ ಪಿಯುಸಿಯ ಹಿತೇಶ್​ ಸರ್ವಾಂಗೀಣ ಆಟಗಾರ ಪ್ರಶಸ್ತಿಯನ್ನು ಪಡೆದರು. 


ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್​, ಡಾ. ಜ್ಯೋತಿ ಮತ್ತು ಯತೀಶ್​ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
To Top