ವಿವೇಕಾನಂದ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Upayuktha
0


ಪುತ್ತೂರು:
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ, ಮಂಗಳೂರು  ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ  ಕಬಡ್ಡಿ ಪಂದ್ಯಾಟವು ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ. 


ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಆದ್ಯಾ ಬಿ.ಆರ್‌, ವರ್ಷಾ. ಕೆ, ಯಜ್ಞಾ, ವೀಕ್ಷಾ ಪಿ, ಶ್ರಾವ್ಯಾ ಯು, ಗ್ರೀಷ್ಮಾ ಎಸ್. ಎ, ತ್ರಿಶಾಲಿ ಕೆ. ಆರ್‌, ರಕ್ಷಾ ಎ.ಎಲ್ ಹಾಗೂ ದ್ವಿತೀಯ ಪಿಯುಸಿಯ ಕಾರ್ತಿಕಾ, ಧನುಶ್ರೀ, ಪ್ರಣತಿ ಹಾಗೂ ತ್ರಿಶಾ ಭಾಗವಹಿಸಿದ್ದರು. ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ಶಂಕರ ದೊಡ್ಡಮನಿ, ಗೌತಮ್‌. ಸಿ, ಸಾಯಿಕುಮಾರ್, ದ್ವಿತೀಯ ಪಿಯುಸಿಯ ಚೈತ್ರೇಶ್‌, ಪ್ರಣಾಮ್‌, ಅನ್ವಿತ್‌, ಉದಯರಾಜ್‌, ಶ್ರೇಯಸ್‌, ಶಮಂತ್‌. ಪಿ, ರೋಹನ್‌. ಕೆ, ಗಗನ್‌ ಎಂ, ತ್ರಿಶೂಲ್‌ ಭಾಗವಹಿಸಿದ್ದರು.  


ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top