ಮಂಗಳೂರು: ವಿಶ್ವ ಶಾಂತಿ ದಿವಸದ ಅಂಗವಾಗಿ ನಾಳೆ ವಾಕಥಾನ್‌

Upayuktha
0


ಮಂಗಳೂರು: 
ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಹಾಗೂ ಯುವ ರೆಡ್‌ಕ್ರಾಸ್‌ ಘಟಕ, ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ನಗರದ ಪಿಲಿಕುಳ ಪ್ರಮುಖ ವೃತ್ತದಿಂದ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದವರೆಗೆ ವಿಶ್ವ ಶಾಂತಿ ದಿವಸದ ಅಂಗವಾಗಿ ವಾಕಥಾನ್‌ ಕಾರ್ಯಕ್ರಮವನ್ನು ಸೆ. 21ರಂದು ಶನಿವಾರ ಬೆಳಗ್ಗೆ9.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.


ಕಾರ್ಯಕ್ರಮಕ್ಕೆ ಮಂಗಳೂರು ನಗರದ ಜಿಲ್ಲಾ ಪೊಲೀಸ್‌ ಆಯುಕ್ತ ಬಿ.ಪಿ. ದಿನೇಶ್‌ ಕುಮಾರ್‌ ಅವರು ಚಾಲನೆ ನೀಡಲಿದ್ದಾರೆ. ದಕ್ಷಿಣ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪಿ.ಬಿ. ಹರೀಶ್‌ ರೈ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 


ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ್‌ ಶೆಟ್ಟಿ, ಭಾರತೀಯ ರೆಡ್‌ಕ್ರಾಸ್‌ ಸಂಸಂಸ್ಥೆ ದ.ಕ. ಜಿಲ್ಲಾ ಘಟಕದ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ಕ್ರಾಸ್‌ ಘಟಕದ ನೋಡಲ್‌ ಅಧಿಕಾರಿ ಡಾ. ಗಾಯತ್ರಿ ಎನ್‌. ಹಾಗೂ ಐಆರ್‌ಸಿಎಸ್‌ ಜಿಲ್ಲಾ ಘಟಕದ ಖಜಾಂಚಿ ಮೋಹನ್‌ ಶೆಟ್ಟಿ ಅವರು ಉಪಸ್ಥಿತರಿರುತ್ತಾರೆ ಎಂದು ಮಂಗಳೂರು ವಿಶ್ವವಿದ್ಯಾನಿಯದ ಯುವ ರೆಡ್‌ಕ್ರಾಸ್‌ ಘಟಕ ನೋಡಲ್‌ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top