ಪೆರ್ನಾಜೆ: ಶ್ರೀ ದುರ್ಗಾಪರಮೇಶ್ವರಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ 35ನೇ ವರ್ಷದ ನವರಾತ್ರಿ ಮತ್ತು ಶ್ರೀ ಶಾರದೋತ್ಸವ ಪ್ರಯುಕ್ತ ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಪಡಿಬಾಗಿಲು ಶಿಕ್ಷಕಿ ಸವಿತಾ ಕೋಡಂದೂರ್ ಮತ್ತು ವಿದ್ಯಾರ್ಥಿಗಳು ವಿದ್ವಾನ್ ಉದಯ ಕಾಸರಗೋಡು
ಸ್ಯಾಕ್ಸೋಫೋನ್ ಜೊತೆ ಭಕ್ತಿಗಾನ ರಸಮಂಜರಿ, ದ್ವಂದ್ವ ವಿಶೇಷ ಕಾರ್ಯಕ್ರಮ ನಡೆಯಿತು. ವೇ.ಮೂ ರಾಮಕೃಷ್ಣ ಭಟ್ ನೀರಮೂಲೆ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕು.ಸಿಂಚನ ಲಕ್ಷ್ಮಿ ಕೋಡಂದೂರ್ ಪ್ರಾರ್ಥನೆಯೊಂದಿಗೆ, ಪಕ್ಕ ವಾದ್ಯದಲ್ಲಿ ರಿದಂ ಪ್ಯಾಡ್ನಲ್ಲಿ ಸುಹಾಸ್ ಹೆಬ್ಬಾರ್ ಪುತ್ತೂರು, ಕೀಬೋರ್ಡ್ ವಾದನದಲ್ಲಿ ಅಮ್ಮು ಮಾಸ್ಟರ್ ಕಾಸರಗೋಡು. ರಘುರಾಮ ಶಾಸ್ತ್ರಿ ಕೊಡಂದೂರು, ಭಜನಾ ಮಂದಿರದ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪಡಿಬಾಗಿಲು, ಉಪಾಧ್ಯಕ್ಷ ಆನಂದ್ ಕುಲಾಲ್ ಪಂಜಿಕಲ್ಲು, ಭಜನಾ ಸಂಚಾಲಕ ನಾರಾಯಣ ಕoಜಿಮೂಲೆ, ಪಿ ಮೋಹನ ಟೈಲರ್, ಪ್ರಧಾನ ಕಾರ್ಯದರ್ಶಿ ಸುಧಾಮ ಅಮೈ ಯತೀಶ್ ಚವರ್ಕಾಡ್, ಕೋಶಾಧಿಕಾರಿ ಬಾಲಕೃಷ್ಣ ಕುಲಾಲ್ ಅಡ್ಯನಡ್ಕ ಹಾಗೂ ಮಂಡಳಿಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಭಾಗವಹಿಸಿದ್ದರು. ಪದ್ಮರಾಜ ಚಾರ್ವಾಕ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ