ಸಿಒಡಿಪಿ ಸಮಾಜ ಸೇವಾ ಸಂಸ್ಥೆ- ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು

Upayuktha
0


ಮಂಗಳೂರು:
17 ಅಕ್ಟೋಬರ್ 2024 ರಂದು, ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ ಶ್ರೀಮಾನ್ ಮೈಕಲ್  ಡಿಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.ವಂ.ಪೀಟರ್ ಪೌಲ್ ಸಲ್ಡಾನ್ಹ ವಹಿಸಿ, ಸಾಂಕೇತಿಕವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಬಡ್ಡಿರಹಿತ ಸಾಲರೂಪದ ನೆರವನ್ನು ಹಸ್ತಾಂತರಿಸಿ ಈ ಕಾರ್ಯಕ್ರಮಕ್ಕೆ ಶುಭ ನುಡಿದರು.


ಶ್ರೀಮಾನ್ ಮೈಕಲ್ ಡಿ ಸೋಜ ರವರು ಹೆತ್ತವರ ಬಗ್ಗೆ ಕಾಳಜಿ ವಹಿಸಿ, ಸಮಾಜದಲ್ಲಿ ಉತ್ತಮ ನಡವಳಿಕೆ ಮತ್ತು ಶಿಕ್ಷಣ ಪಡೆದು, ತಮ್ಮ ಮಾತೃಭಾಷೆಗೆ ಪ್ರಾಮುಖ್ಯತೆ ಕೊಡಬೇಕು ಹಾಗೂ ಹಿರಿಯರು ನಮಗೆ ಮಾಡಿದ ಸಹಾಯವನ್ನು ಎಂದಿಗೂ ಮರೆಯಬಾರದು. ವಿದ್ಯಾಭ್ಯಾಸ ಮುಗಿದ ನಂತರ, ಹೆತ್ತವರನ್ನು ಚೆನ್ನಾಗಿ ನೋಡುವ ಜವಬ್ದಾರಿ ವಹಿಸಿ ಮತ್ತು ತಮ್ಮಿಂದ ಬಡವರಿಗೆ ಸಹಾಯ ಮಾಡುವ ಆಸಕ್ತಿ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಅವರ ಧರ್ಮಪತ್ನಿ ಶ್ರೀಮತಿ ಫ್ಲಾವಿಯ ಡಿ ಸೋಜ, ಸಿಒಡಿಪಿ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ| ವಿನ್ಸೆಂಟ್ ಡಿ ಸೋಜ ಮತ್ತು ಸಹ ನಿರ್ದೇಶಕ ವಂದನೀಯ ಫಾ| ಲೊರೆನ್ಸ್ ಕುಟಿನ್ಹಾ ರವರು ಹಾಜರಿದ್ದರು.


ಸಿಒಡಿಪಿ ನಿರ್ದೇಶಕರಾದ ರೆ.ಫಾ. ವಿನ್ಸೆಂಟ್ ಡಿ ಸೋಜ ಶಿಕ್ಷಣ ನಿಧಿಯ ಪ್ರತಿಷ್ಠಾಪಕ ಧಾನಿಗಳಾದ ಶ್ರೀಮಾನ್ ಮೈಕಲ್ ಡಿ ಸೋಜ ಮತ್ತು ಶ್ರೀಮತಿ ಫ್ಲಾವಿಯ ಡಿಸೋಜ ರವರ ಪರಿಚಯ ನೀಡಿದರು. ಬಿಷಪ್‌ರವರು ಅವರಿಗೆ ಗೌರವ ಅರ್ಪಣೆ ಸಲ್ಲಿಸಿದರು. ಕುಟುಂಬದ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ 103 ವಿದ್ಯಾರ್ಥಿಗಳಿಗೆ ರೂ. 86,60,000/- ಬಡ್ಡಿ ರಹಿತ ಸಾಲವನ್ನು ಬ್ಯಾಂಕಿನ ಮುಖಾಂತ್ರ ವಿತರಿಸಲಾಗುವುದು. ವಂದನೀಯ ಫಾ| ಲೊರೆನ್ಸ್ ಕುಟಿನ್ಹಾರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಾರ್ಪನೆ ಗೈದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top