ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ವಿಜೇತ ಜ್ಯೋತಿಭಾ ಜಾಂಬ್ರೆಗೆ ಸನ್ಮಾನ

Upayuktha
0


ಬೇವೂರ: ಬೇವೂರಿನ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ಬಿ.ಎ. ವಿದ್ಯಾರ್ಥಿ ಜ್ಯೋತಿಭಾ ಜಾಂಬ್ರೆ ಇತ್ತೀಚೆಗೆ ಜರುಗಿದ ಕುಸ್ತಿ ಕ್ರೀಡಾ ಕೂಟಗಳ ಪೈಕಿ ಬಾಗಲಕೋಟೆ ಜಿಲ್ಲಾ ಮಟ್ಟದ, ಹಾಗೂ ಬೆಳಗಾವಿ ವಲಯ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಆಯ್ಕೆಗೊಂಡು ದಸರಾ ಪ್ರಯುಕ್ತ ಮೈಸೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ದಸರಾ ಕ್ರೀಡಾ ಕೂಟದ ಪುರುಷರ ವಿಭಾಗದ 70 ಕೆ.ಜಿ ಕುಸ್ತಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಗೋಲ್ಡ್ ಮೆಡಲ್ ಹಾಗೂ ಪ್ರಶಸ್ತಿ ಪತ್ರ ಪಡೆದು  ಮಹಾವಿದ್ಯಾಲಯಕ್ಕೆ ಕೀರ್ತಿಯನ್ನು ತಂದಿದ್ದಾರೆ.


ದಸರಾ ಕ್ರೀಡಾ ಕೂಟವನ್ನು ಯಶಸ್ವಿಯಾಗಿ ಪೂರೈಸಿ ಮಹಾವಿದ್ಯಾಲಯಕ್ಕೆ ಆಗಮಿಸಿದ ಕ್ರೀಡಾ ವಿಜೇತ ಜ್ಯೋತಿಭಾ ಜಾಂಬ್ರೆಯವರಿಗೆ ಸಂಸ್ಥೆಯ ಅಧ್ಯಕ್ಷ ಜಿ. ಜಿ. ಮಾಗನೂರ ವಕೀಲರು ಗೌರವ ಸನ್ಮಾನವನ್ನು ನೇರವೇರಿಸಿ ಕ್ರೀಡಾ ವಿಜೇತ ವಿದ್ಯಾರ್ಥಿಯಿಂದ ನಿರಂತರವಾಗಿ ಕುಸ್ತಿ ವಿಭಾಗದಲ್ಲಿ ಸಾಧನೆಗಳು ಹೊರಹೊಮ್ಮಲಿ ಎಂದು ಶುಭ ಹಾರೈಸಿದರು. 


ಈ ಸನ್ಮಾನ ಸಮಾರಂಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಡಾ. ಜಗದೀಶ ಗು. ಭೈರಮಟ್ಟಿ, ಹಿರಿಯ ಉಪನ್ಯಾಸಕರಾದ ಬಿ.ಬಿ ಬೇವೂರ, ಹಿರಿಯ ಉಪನ್ಯಾಸಕ ಎಸ್.ಎಸ್. ಆದಾಪೂರ ಕನ್ನಡ ಉಪನ್ಯಾಸಕ ಡಾ. ಸಂಗಮೇಶ ಹಂಚಿನಾಳ, ಎನ್.ಎಸ್. ಎಸ್ ವಿಭಾಗದ ಯೋಜನಾಧಿಕಾರಿ ಜಿ.ಎಸ್ ಗೌಡರ ಇಂಗ್ಲೀಷ ಉಪನ್ಯಾಸಕ ಡಿ.ವಾಯ್. ಬುಡ್ಡಿಯವರ, ಇತಿಹಾಸ ಉಪನ್ಯಾಸಕ ಡಾ. ಎ.ಎಂ. ಗೊರಚಿಕ್ಕನವರ, ರಾಜ್ಯಶಾಸ್ತç ವಿಭಾಗದ ಉಪನ್ಯಾಸಕ ನಾಗಲಿಂಗೇಶ ಬೆಣ್ಣೂರ ಸೇರಿದಂತೆ ಭೋಧಕೇತರ ಸಿಬ್ಬಂದಿ ವರ್ಗದ ಆರ್. ಬಿ. ಕರಡಿಗುಡ್ಡ, ಶಿವು ಕಟಗಿ ಮುಂತಾದವರು ಉಪಸ್ಥಿತರಿದ್ದರು. 


ವರದಿ: ಅಮರೇಶ ಮ ಗೊರಚಿಕ್ಕನವರ



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top