ಕಾಸರಗೋಡು: ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಅ.11ರಂದು ಸಂಜೆ 7 ಗಂಟೆಗೆ ನಡೆಯುವ "ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2024'ರ 'ಶ್ರೀ ದುರ್ಗಾಂಬಾ ವೇದಿಕೆ'ಯಲ್ಲಿ ಡಾ. ವಾಣಿಶ್ರೀ ಕಾಸರಗೋಡು ಮತ್ತು ಗುರುರಾಜ್ ಕಾಸರಗೋಡು ನೇತೃತ್ವದ, ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.) ಸಂಸ್ಥೆಯ ಸಾಹಿತ್ಯ ಗಾನ ನೃತ್ಯ ವೈಭವ ನಡೆಯಲಿದೆ.
ಈ ವೇದಿಕೆಯಲ್ಲಿ ಅಂತರ್ ರಾಜ್ಯ ನೆಲೆಯಲ್ಲಿ ಸಾಂಸ್ಕೃತಿಕ, ಸಾಹಿತ್ಯ ಕಾರ್ಯಕ್ರಮಗಳೊಂದಿಗೆ ಸುಮಾರು 300ಕ್ಕೂ ಅಧಿಕ ಕಲಾವಿದರಿಗೆ ವೇದಿಕೆ ಕಲ್ಪಿಸಿದ ಡಾ ವಾಣಿಶ್ರೀ ಕಾಸರಗೋಡು ಮತ್ತು ಶ್ರೀ ಗುರುರಾಜ್ ಕಾಸರಗೋಡು ಇವರಿಗೆ ಕಾಸರಗೋಡು ದಸರಾ ವಿಶೇಷ ಸನ್ಮಾನ ನೀಡಿ ಗೌರವಿಸಲಿದ್ದೇವೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಲಾಭಿಮಾನಿಗಳು ಭಾಗವಹಿಸಬೇಕೆಂದು ಪಾಂಗೋಡು ದುರ್ಗಾಪರಮೇಶ್ವರೀ ಸುಬ್ರಹ್ಮಣ್ಯ ಕ್ಷೇತ್ರ ಸಮಿತಿ ಅಧ್ಯಕ್ಷ ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ