ವಿದ್ಯಾ ಎಸ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Upayuktha
1 minute read
0


ಮಂಗಳೂರು: ವಿದ್ಯಾ ಎಸ್ ಅವರು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಕಲಾ ವಿಭಾಗದ ಡೀನ್ ಮತ್ತು ಸಮಾಜಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಮುಖ್ಯಸ್ಥರೂ ಹಿರಿಯ ಪ್ರಾಧ್ಯಾಪಕರೂ ಆದ ಪ್ರೊಫೆಸರ್ ಡಾ. ಗುರುಲಿಂಗಯ್ಯ ಅವರ ಮಾರ್ಗದರ್ಶನದಲ್ಲಿ "ಕರ್ನಾಟಕದ ಹವ್ಯಕ ಸಮುದಾಯ: ಒಂದು ಸಮಾಜಶಾಸ್ತ್ರೀಯ ಅಧ್ಯಯನ" ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ.


ಸುಮಾರು ಹದಿನಾಲ್ಕು ವರ್ಷಗಳಿಂದ ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ದಲ್ಲಿ ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕಿಯಾಗಿ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಬಾಹುಬಲಿ ಪ್ರಾಕೃತ ವಿದ್ಯಾಪೀಠ (ರಿ) ದಿಂದ  ಸಂಚಾಲಿತ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ನಡೆಸಿದ 2017-18 ನೇ ಸಾಲಿನ ಪ್ರಾಕೃತ ಡಿಪ್ಲೊಮ ಪರೀಕ್ಷೆಯಲ್ಲಿ ನಾಲ್ಕನೆಯ ರ‍್ಯಾಂಕ್ ಗಳಿಸಿರುತ್ತಾರೆ.


ಇವರು ಮಂಗಳೂರು ನಿವಾಸಿಯಾಗಿದ್ದು ಸುಳ್ಯ ತಾಲ್ಲೂಕಿನ ಬಾಳುಗೋಡು ಗ್ರಾಮದ ಮಾನಡ್ಕದ ಶೇಡಿಗುಮ್ಮೆ ಪುರುಷೋತ್ತಮ ಭಟ್ ಹಾಗೂ ಇಂದಿರಾ ದಂಪತಿಗಳ ಪುತ್ರಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top