ಮಧೂರು ಬ್ರಹ್ಮಕಲಶೋತ್ಸವ - ಕೋಟೂರು ಪ್ರಾದೇಶಿಕ ಸಮಿತಿ ರಚನಾ ಸಭೆ

Upayuktha
0


ಕಾಸರಗೋಡು: ದಕ್ಷಿಣ ಭಾರತದ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ಮತ್ತು ಮೂಡಪ್ಪ ಸೇವೆಯು 2025 ಮಾರ್ಚ್ 27 ರಿಂದ ಏಪ್ರಿಲ್ 7 ರವರೆಗೆ ಆಯೋಜಿಸಲಾಗಿದೆ.


ನಮ್ಮ ನಾಡಿನ ಪ್ರಸಿದ್ಧ ಮಹೋತ್ಸವದ ಯಶಸ್ಸಿಗಾಗಿ ನಾಡಿನ ವಿವಿಧ ಪ್ರದೇಶಗಳಲ್ಲಿ ಪ್ರಾದೇಶಿಕ ಸಮಿತಿ ರಚಿಸುವ ಕಾರ್ಯ ಸಾಗುತ್ತಾ ಇದೆ. ಈ ಉದ್ದೇಶದೊಂದಿಗೆ ಕೋಟೂರು ಕಾರ್ತಿಕೇಯ ಭಜನಾ ಮಂದಿರದಲ್ಲಿ ಭಾನುವಾರ (ಅ.27)  ಕೋಟೂರು ಪ್ರಾದೇಶಿಕ ಸಮಿತಿ ರಚನಾ ಸಭೆ ಜರಗಿತು.


ಸೀತಾರಾಮ ಬಳ್ಳುಳ್ಳಾಯ ಅಧ್ಯಕ್ಷ ಸ್ಥಾನ ವಹಿಸಿ ದಿಕ್ಸೂಚಿ ಮಾತುಗಳನ್ನಾಡಿದರು. ಗೋವಿಂದ ಬಳ್ಳಮೂಲೆ ಸಮಿತಿಯ ಕಾರ್ಯ ಯೋಜನೆಗಳ ಬಗ್ಗೆ ಮಾಹಿತಿಗಳನ್ನಿತ್ತರು.


ಸಭೆಯಲ್ಲಿ ಸಮಿತಿಯ ಕಾರ್ಯಕಾರೀ ಸಮಿತಿಯನ್ನು ರೂಪಿಸಲಾಯಿತು. ನರಸಿಂಹ ಭಟ್ ಅಧ್ಯಕ್ಷರು,  ಪ್ರಕಾಶ ಕೋಟೂರು ಕಾರ್ಯದರ್ಶಿ, ಸುಬ್ರಹ್ಮಣ್ಯ ಭಟ್ ಅಡ್ಕ ಕೋಶಾಧಿಕಾರಿ ಮತ್ತು ಸದಸ್ಯರುಗಳನ್ನು ಸಮಿತಿಗೆ ಆಯ್ಕೆ ಮಾಡಲಾಯಿತು.


ಸಭೆಯಲ್ಲಿ ನಿವೇದನಾ ಪತ್ರ ಮತ್ತು ರಶೀದಿ ಪುಸ್ತಕಗಳನ್ನು ಸಮಿತಿಯವರಿಗೆ ಹಸ್ತಾ೦ತರಿಸಲಾಯಿತು.  ಮುಳಿಯಾರು ಪಂಚಾಯತ್ ಸಮಿತಿ ಸದಸ್ಯರಾದ ಮುರಳಿಕೃಷ್ಣ ಸ್ಕಂದ, ಗೋಪಾಲನ್ ಕೋಟೂರ್ ಮೊದಲಾದವರು ಉಪಸ್ಥಿತರಿದ್ದರು.  ಪ್ರಕಾಶ್ ಕೋಟೂರು ಧನ್ಯವಾದವಿತ್ತರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top