
ಉಡುಪಿ: ಹೆಸರಾಂತ ಉದ್ಯಮಿ ಪದ್ಮವಿಭೂಷಣ ರತನ್ ಟಾಟಾ ಅವರ ನಿಧನಕ್ಕೆ ಉಡುಪಿಯ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಟಾಟಾ ಅವರು ಪುತ್ತಿಗೆ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭವನ್ನು ಸ್ಮರಿಸಿಕೊಂಡಿದ್ದಾರೆ.
ವ್ಯಕ್ತಿಯಲ್ಲಿ ಆದರ್ಶಗಳು ನೆಲೆಸಿದರೆ ಇಂತಹ ವ್ಯಕ್ತಿತ್ವ ರೂಪುಗೊಳ್ಳುತ್ತದೆ. “ದೇಶ ಮೊದಲು“ ಎಂಬ ತತ್ವದ ವ್ಯಕ್ತಿತ್ವ ರತನ್ ಟಾಟಾ ಅವರದು.
ಆದರ್ಶಮಯ ಜೀವನ ನಡೆಸಿದ ಅವರು ನಮ್ಮ ಪುತ್ತಿಗೆ ಮೂಲ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಭಗವದ್ಗೀತೆಯ ಬಗ್ಗೆ ತಮಗಿರುವ ಆದರ ಪ್ರಕಟಿಸಿದ್ದು ನಮ್ಮ ಮನಸ್ಸಿನಲ್ಲಿ ಹಸಿರಾಗಿದೆ. ಶ್ರೀ ಕೃಷ್ಣ ಮುಖ್ಯಪ್ರಾಣರು ಅವರಿಗೆ ಸದ್ಗತಿ ನೀಡಲಿ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.
ಶ್ರೀ ಪುತ್ತಿಗೆ ವಿದ್ಯಾಪೀಠಕ್ಕೆ ರತನ್ ಟಾಟಾ 10.02.2014ರಂದು ಭೇಟಿ ನೀಡಿದ್ದರು. ಟಾಟಾ ಸಮೂಹ ಸಂಸ್ಥೆಗಳ ಅಧ್ಯಕ್ಷ ರತನ್ ಟಾಟಾ ಅವರು ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಹ್ವಾನ ಮೇರೆಗೆ ಶ್ರೀಪುತ್ತಿಗೆ ಮೂಲಮಠದಲ್ಲಿರುವ ವಿದ್ಯಾಪೀಠಕ್ಕೆ ಭೇಟಿ ಕೊಟ್ಟು ಶ್ರೀ ನರಸಿಂಹ ಹಾಗೂ ಗಣಪತಿ ದೇವರ ದರ್ಶನ ಮಾಡಿ ನೂತನ ಸ್ವಾಗತ ಗೋಪುರ ಉದ್ಘಾಟನೆ ಮಾಡಿ ಶ್ರೀಗಳಿಂದ ಆಶೀರ್ವಾದ ಪಡೆದಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ