ಉಡುಪಿ: ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ

Upayuktha
1 minute read
0


ಉಡುಪಿ: ಮಹರ್ಷಿ ವಾಲ್ಮೀಕಿ ಸಂಘಟನೆ ಉಡುಪಿ ಜಿಲ್ಲೆಯ ವತಿಯಿಂದ ಜಯಂತ್ಯುತ್ಸವವನ್ನು ಉಡುಪಿಯ ಮಥುರಾ ಕಂಫರ್ಟ್ಸ್ ನಲ್ಲಿ ಆಯೋಜಿಸಲಾಗಿತ್ತು.


ಉದ್ಯಮಿ ವಿಶ್ವನಾಥ ಶೆಣೈಯವರು ವಾಲ್ಮೀಕಿ ಮಹರ್ಷಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಕಲಾರಾಧಕ, ಕಲಾವಿದ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ ಇವರನ್ನು ಗೌರವಿಸಿ ಅಭಿನಂದಿಸಲಾಯಿತು.


ಭಾರತ್ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡವೂರು ಮಾತನಾಡಿ, ಸಂಘಟನೆಯಲ್ಲಿ ಬಲವಿದೆ; ಒಟ್ಟಾಗಿ ಸೇರಿ ಕೆಲಸ ಮಾಡಿದಾಗ ಸರಕಾರದ ಮಟ್ಟಕ್ಕೂ ನಮ್ಮ ಬೇಡಿಕೆಯನ್ನು ತಲುಪಿಸಲು ಸಾಧ್ಯ ಎಂದರು.


ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್. ಪಿ ಮಾತನಾಡಿ ಜಯಂತ್ಯೋತ್ಸವವನ್ನು ಆಚರಿಸುವ ಮೂಲಕ ಶ್ರೇಷ್ಠ ದಾರ್ಶನಿಕ ವಾಲ್ಮೀಕಿ ಮಹರ್ಷಿಯನ್ನು ನೆನಪಿಸುವ ಮಹತ್ ಕಾರ್ಯವನ್ನು ಮಾಡಿರುವುದು ಶ್ಲಾಘನೀಯ ಎಂದರು.


ಮಹರ್ಷಿ ವಾಲ್ಮೀಕಿ ಸಂಘಟನೆಯ ಗೌರವಾಧ್ಯಕ್ಷ ಸಿದ್ದಬಸಯ್ಯ ಸ್ವಾಮೀಜಿ ಚಿಕ್ಕಮಠ ಉಪನ್ಯಾಸ ನೀಡಿದರು.


ಈ ಸಂದರ್ಭದಲ್ಲಿ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ ರಂಜನಿ ವಸಂತ್, ನಗರಸಭಾ ಸದಸ್ಯೆ  ಅಮೃತ ಕೃಷ್ಣಮೂರ್ತಿ, ಶಾಂತಪ್ಪ ದೊರೆ, ಆನಂದ ವಾಲ್ಮೀಕಿ, ಗೋಪಾಲ ದೇವದುರ್ಗ, ಶಿವರಾಜ್ ವಾಲಿಕಾರ್, ಕನಕ, ದೇವು ದೊರೆ, ಗೋಪಾಲ ದೊರೆ, ಸಂಗನಗೌಡ ಸಾತಿಹಾಳ ಉಪಸ್ಥಿತರಿದ್ದರು. ಉಡುಪಿ ತಾಲ್ಲೂಕು ಕಸಾಪ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top