ತೆಂಕನಿಡಿಯೂರು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Upayuktha
0


ತೆಂಕನಿಡಿಯೂರು: ‘ಸಾಂವಿಧಾನಿಕ ಮೌಲ್ಯಗಳು ಮತ್ತು ನಾಗರೀಕ ಬದುಕು' ವಿಶೇಷ ಉಪನ್ಯಾಸ ನೀಡಿದ ಕೋಟೇಶ್ವರ ಸರಕಾರಿ ಪದವಿ ಪೂರ್ವಕಾಲೇಜು ಉಪನ್ಯಾಸಕ ಸುಧಾಕರ್‌ ದೇವಾಡಿಗ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ನಾಗರಿಕ ಬದುಕಿನ ಎಲ್ಲಾ ಮೌಲ್ಯಗಳನ್ನು ಸಂವಿಧಾನ ಅಂತರ್ಗತಗೊಳಿಸಿದೆ. ನಮ್ಮ ವರ್ತಮಾನ ಮತ್ತು ಭವಿಷ್ಯ ಎರಡೂ ಸಂವಿಧಾನದ ನೆಲೆಗಟ್ಟಿನಲ್ಲಿದೆ. ಕಳೆದ 75 ವರ್ಷಗಳ ಸ್ವತಂತ್ರ ಭಾರತದಲ್ಲಿ ತನ್ನ ಅಸ್ತಿತ್ವ ಮತ್ತು ಪ್ರಸ್ತುತತೆಯನ್ನು ಉಳಿಸಿಕೊಂಡಿರುವುದೇ ಇದರ ಮಹತ್ವಕ್ಕೆ ಸಾಕ್ಷಿ. ಸಂವಿಧಾನದಿಂದಾಗಿಯೇ ನಮ್ಮ ಸ್ವಾತಂತ್ರ್ಯ ಸಾಕಾರಗೊಂಡಿದೆ. ಸಮಾನತೆ, ವ್ಯಕ್ತಿಗೌರವಕಾಪಾಡಿದೆ. ವೈವಿಧ್ಯಮಯ ಭಾರತದಲ್ಲಿ ಸಂವಿಧಾನವನ್ನು ಅರ್ಥೈಸಿಕೊಂಡಲ್ಲಿ ಮಾತ್ರ ಸೌಹಾರ್ದ ಸಾಮರಸ್ಯ, ಶಾಂತಿ ಮತ್ತು ನ್ಯಾಯ ಸ್ಥಾಪನೆ ಸಾಧ್ಯ. ಆದರೆ ನಮ್ಮ ಪ್ರಜಾಪ್ರಭುತ್ವದಲ್ಲಿಯ ಭ್ರಷ್ಟಾಚಾರ ರಾಜಕೀಯ-ಸಾಮಾಜಿಕ ಅಪರಾಧಗಳು, ಪ್ರತ್ಯೇಕವಾದ ಇತ್ಯಾದಿ ಸಂವಿಧಾನ ಕೊಟ್ಟ ಸುಂದರ ಬದುಕಿಗೇ ಸವಾಲಾಗಿದೆ ಎಂದರು.


ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವ್ಕರ್ ಸಂವಿಧಾನ ಪ್ರತಿಜ್ಞಾ ವಿಧಿ ಬೋಧಿಸಿ ಸಂವಿಧಾನ ಪ್ರಜ್ಞೆಯ ಅವಶ್ಯಕತೆಯನ್ನು ತಿಳಿಸಿದರು.


ಕಾರ್ಯಕ್ರಮದಲ್ಲಿ ಐಕ್ಯುಎಸಿ ಶೈಕ್ಷಣಿಕ ಸಂಚಾಲಕಿ ಡಾ. ಮೇವಿ ಮಿರಾಂದ,  ಶ್ರೀಧರ್ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಘು ನಾಯ್ಕ್, ಎಂ.ಎಸ್.ಡಬ್ಲ್ಯೂ ಮುಖ್ಯಸ್ಥೆ ಸುಷ್ಮಾ ಟಿ, ಬಿ.ಸಿ.ಎ ವಿಭಾಗ ಮುಖ್ಯಸ್ಥ ರಾಜ್‌ಕುಮಾರ್, ರಾಜಕೀಯ ಶಾಸ್ತ್ರ ಉಪನ್ಯಾಸಕರಾದ ಆರತಿ, ಸಮಾಜಕಾರ್ಯ ಸಹಾಯಕ ಪ್ರಾಧ್ಯಾಪಕಿ ರುಬಿಯಾ, ಇತಿಹಾಸ ಉಪನ್ಯಾಸಕರಾದ ಡಾ. ಮೋಹನ್, ಡಾ. ಮಹೇಶ್‌ಕುಮಾರ್ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಗೈದು ಸಂವಿಧಾನ ಪೀಠಿಕೆಯ ಪ್ರತಿ ವಿತರಿಸಲಾಯಿತು. ಕಾರ್ಯಕ್ರಮ ಸಂಘಟಿಸಿದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಶಾಂತ್ ನೀಲಾವರ ಕಾರ್ಯಕ್ರಮದ ಔಚಿತ್ಯ ತಿಳಿಸಿ ಸ್ವಾಗತಿಸಿದರೆ, ಬಿ.ಸಿ.ಎ ವಿದ್ಯಾರ್ಥಿ ಧನುಶ್ ವಂದನಾರ್ಪಣೆಗೈದರು. ಬಿ.ಸಿ.ಎ ವಿದ್ಯಾರ್ಥಿನಿ ರುತಿ ಕಾರ್ಯಕ್ರಮ ನಿರೂಪಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top