ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಗೋವಾ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿ: ಸಿದ್ಧಣ್ಣ ಮೇಟಿ

Upayuktha
0


ಪಣಜಿ: ಡಿಸೆಂಬರ್ ನಲ್ಲಿ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಗೋವಾದಿಂದ ಕಸಾಪ ರಾಜ್ಯ ಘಟಕ, ಜಿಲ್ಲಾ ಮತ್ತು ತಾಲೂಕಾ ಘಟಕಗಳ ಪದಾಧಿಕಾರಿಗಳು ಹಾಗೂ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಇಂತಹ ಒಂದು ಬೃಹತ್ ಸಮ್ಮೇಳನವನ್ನು ಕಣ್ತುಂಬಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯಾಧ್ಯಕ್ಷ ಸಿದ್ಧಣ್ಣ ಮೇಟಿ ನುಡಿದರು.


ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ ಘಟಕ ಉತ್ತರ ಮತ್ತು ದಕ್ಷಿಣ ಗೋವಾ ಜಿಲ್ಲಾ ಘಟಕ ಹಾಗೂ ತಾಲೂಕ ಘಟಕದ ಪದಾಧಿಕಾರಿಗಳ ಸರ್ವಸಾಧಾರಣ ಸಭೆ ಮಡಗಾಂವ್‌ನಲ್ಲಿ ಭಾನುವಾರ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ ಅಧ್ಯಕ್ಷ ಸಿದ್ದಣ್ಣ ಮೇಟಿ ವಹಿಸಿದ್ದರು.


ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗೋವಾ ರಾಜ್ಯದಿಂದ ಪದಾಧಿಕಾರಿಗಳು ಪಾಲ್ಗೊಳ್ಳುವ ಕುರಿತು ಚರ್ಚಿಸಲಾಯಿತು. ಜನವರಿ 5 ರಂದು ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ ಘಟಕ ದಕ್ಷಿಣ ಗೋವಾ ಜಿಲ್ಲಾ ಹಾಗೂ ಸಾಲಸೆಟ್ ತಾಲೂಕ ಘಟಕದ ಸಯುಕ್ತ ಆಶ್ರಯದಲ್ಲಿ ಗೋವಾದ ಮಡಗಾಂವ್ ನಲ್ಲಿ ಕಾರ್ಯಕ್ರಮ ಆಯೋಜಿಸುವ ಕುರಿತು ಚರ್ಚಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ ಅಧ್ಯಕ್ಷ ಸಿದ್ದಣ್ಣ ಮೇಟಿ ಅವರ ಮುಖೇನ ವಿವಿಧ ವಿಷಯಗಳು ಚರ್ಚೆಗೆ ಬಂದವು.

     

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ ಗೌ. ಕಾರ್ಯದರ್ಶಿ ನಾಗರಾಜ್ ಗೋಂದಕರ್, ಕಸಾಪ ಗೋವಾ ರಾಜ್ಯ ಘಟಕದ ಸಂಘಸಂಸ್ಥೆಗಳ ಪ್ರತಿನಿಧಿ ಪಡದಯ್ಯಾಸ್ವಾಮಿ ಹಿರೇಮಠ, ದಕ್ಷಿಣ ಗೋವಾ ಜಿಲ್ಲಾ ಘಟಕದ ಅಧ್ಯಕ್ಷ ಪರಶುರಾಮ ಕಲಿವಾಳ, ಪಣಜಿ ತಾಲೂಕಾ ಘಟಕದ ಅಧ್ಯಕ್ಷ ಹನುಮಂತ ಗೊರವರ್, ಸಾಲಸೇಟ್ ತಾಲೂಕಾ ಘಟಕದ ಅಧ್ಯಕ್ಷ ಬಸವರಾಜ್ ಬನ್ನಿಕೊಪ್ಪ ಸೇರಿದಂತೆ ಕಸಾಪ  ಜಿಲ್ಲಾ ಹಾಗೂ ತಾಲೂಕ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದು ತಮ್ಮ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top