ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕನ್ನಡ ಭುವನೇಶ್ವರಿ ರಥಕ್ಕೆ ಮಾಲಾರ್ಪಣೆ ಮಾಡಿ ರಥಯಾತ್ರೆ ಸುಗಮವಾಗಲಿ ಎಂದು ಹಾರೈಸಿದರು.
ಉಜಿರೆ: ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಮ್ಮ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಮಂಡ್ಯದಲ್ಲಿ ನಡೆಯಲಿರುವ ೮೭ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರೇರಕವಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು.
ಶನಿವಾರ ಧರ್ಮಸ್ಥಳಕ್ಕೆ ಆಗಮಿಸಿದ ಕನ್ನಡ ಭುವನೇಶ್ವರಿ ರಥಕ್ಕೆ ಮಾಲಾರ್ಪಣೆ ಮಾಡಿ ಗೌರವಿಸಿದ ಹೆಗ್ಗಡೆಯವರು ಗ್ರಾಮೀಣ ಪ್ರದೇಶವಾದ ಧರ್ಮಸ್ಥಳದಲ್ಲಿ ಅಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಡಾ. ಹಂಪನಾ ನೇತೃತ್ವದಲ್ಲಿ 51ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿರುವುದನ್ನು ಧನ್ಯತೆಯಿಂದ ಸ್ಮರಿಸಿದರು.
ಕನ್ನಡ ಭುವನೇಶ್ವರಿ ರಥಯಾತ್ರೆ ಸುಗಮವಾಗಲಿ ಎಂದು ಹಾರೈಸಿದ ಹೆಗ್ಗಡೆಯವರು, ಕನ್ನಡ ಸಾಹಿತ್ಯ ಸಮ್ಮೇಳನವು ನಾಡು, ನುಡಿ ಮತ್ತು ಸಂಸ್ಕೃತಿ ಬಗ್ಯೆ ಅಭಿಮಾನ, ಅರಿವು ಹಾಗೂ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು.
ಡಿ. ಹರ್ಷೇಂದ್ರ ಕುಮಾರ್, ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ದೇವಳ ಪಾರುಪತ್ಯಗಾರರಾದ ಲಕ್ಷ್ಮೀ ನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ