ನಾಳೆ (ನ.10) ಮೂರು ಸಂಶೋಧನಾ ಗ್ರಂಥಗಳ ಲೋಕಾರ್ಪಣೆ

Upayuktha
0


ಹುನಗುಂದ: ಪಟ್ಟಣದ ವಿ.ಎಂ.ಕೆ.ಎಸ್.ಆರ್. ವಸ್ತ್ರದ ಕಲಾ, ವಿಜ್ಞಾನ ಹಾಗೂ ವಿ.ಎಸ್. ಬೆಳ್ಳಿಹಾಳ ವಾಣಿಜ್ಯ ಮಹಾವಿದ್ಯಾಲಯ, ಕನ್ನಡ ವಿಭಾಗ, ಕನ್ನಡ ಸಂಘ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ನ.10 ರಂದು ಬೆಳಿಗ್ಗೆ 10:30 ಗಂಟೆಗೆ ಡಾ.ತಿಪ್ಪೇಸ್ವಾಮಿ ಡಿ.ಎಸ್. ಅವರು ರಚಿಸಿದ ಮೂರು ಸಂಶೋಧನಾ ಗ್ರಂಥಗಳನ್ನು ಲೋಕಾರ್ಪಣೆ ಸಮಾರಂಭ ಜರುಗಲಿದೆ.


ಚಿತ್ತರಗಿ ಸಂಸ್ಥಾನ ಮಠ ಇಳಕಲ್ಲದ ಗುರು ಮಹಾಂತ ಶ್ರೀಗಳು ಸಾನಿಧ್ಯ ವಹಿಸುವರು. ವಿ.ಮ.ವಿ.ವ.ಸಂಘದ ಗೌರವ ಕಾರ್ಯದರ್ಶಿ ಡಾ.ಮಹಾಂತೇಶ ಕಡಪಟ್ಟಿ ಅಧ್ಯಕ್ಷತೆಯನ್ನು ವಹಿಸುವರು. ಪ್ರೊ.ಮಹೇಶ ತಿಪಶೆಟ್ಟಿ ಹುನಗುಂದ ತಾಲೂಕಿನ ಜನಪದ ವ್ಯೆದ್ಯರು ಎಂಬ ಪುಸ್ತಕಾವಲೋಕನ ಮಾಡುವರು. ಡಾ.ಸದಾಶಿವ ಮರ್ಜಿ ಬಹುಮುಖಿ ಸಾಹಿತ್ಯ ಮತ್ತು ಸಂಸ್ಕೃತಿ ಬಗ್ಗೆ ಮಾತನಾಡಲಿದ್ದಾರೆ. ಡಾ. ರಾಜಶೇಖರ ಬಸುಪಟ್ಟದರು ಹುಡುಕಿದ ಹೊನ್ನು ಗ್ರಂಥದ ಬಗ್ಗೆ ಮಾತನಾಡಲಿದ್ದಾರೆ.


ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಎಸ್.ಕೆ.ಮಠ, ಡಾ. ಮುರ್ತುಜಾ ಒಂಟಿ, ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಲ್ಲಿಕಾರ್ಜುನ ಸಜ್ಜನ ಉಪಸ್ಥಿತರಿರುವರು ಎಂದು ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ತಿಪ್ಪೇಸ್ವಾಮಿ ಡಿ.ಎಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top