ಪಣಜಿ: ಕರ್ನಾಟಕ ರಾಜ್ಯೋತ್ಸವ ಸಮಿತಿ ಗೋವಾ ವತಿಯಿಂದ ನವೆಂಬರ್ 10 ರಂದು ಬೆಳಿಗ್ಗೆ 9.30 ಕ್ಕೆ ಪರ್ವರಿಯ ಸಂತ ಗಾಡ್ಗೆ ಮಹಾರಾಜ ಸಭಾಂಗಣದಲ್ಲಿ ಗೋವಾದ ಎಲ್ಲ ಕನ್ನಡಪರ ಸಂಘಟನೆಗಳ ಸಹಕಾರದಲ್ಲಿ "ಗೋವಾ ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮಾಚರಣೆ" ಕಾರ್ಯಕ್ರಮ ಆಯೋಜಿಸಲಾಗಿದೆ.
ಸಮಾರಂಭದಲ್ಲಿ ಬೆಳಗಾವಿಯ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಜಿ ಹಾಗೂ ಬಾಗಲಕೋಟೆಯ ಸಿದ್ಧನಕೊಳ್ಳದ ಮಠದ ಧರ್ಮಾಧಿಕಾರಿಗಳಾದ ಡಾ.ಶಿವಕುಮಾರ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.
ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಸಮಾರಂಭದ ಉಧ್ಘಾಟನೆ ನೆರವೇರಿಸಲಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಸಮಿತಿ ಗೋವಾದ ಅಧ್ಯಕ್ಷ ಮುರಳಿ ಮೋಹನ್ ಶೆಟ್ಟಿ ಹಾಗೂ ಕರ್ನಾಟಕ ರಾಜ್ಯೋತ್ಸವ ಸಮೀತಿಯ ಗೌರವಾಧ್ಯಕ್ಷ ಸಿದ್ಧಣ್ಣ ಮೇಟಿ ಉಪಸ್ಥಿತರಿರುವರು.
ವಿಶೇಷ ಆಮಂತ್ರಿತರಾಗಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, ಮುಖ್ಯ ಅತಿಥಿಗಳಾಗಿ ಕೇಂದ್ರ ಸರ್ಕಾರದ ರಾಜ್ಯ ರೈಲ್ವೆ ಮಂತ್ರಿ ವಿ.ಸೋಮಣ್ಣ, ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ, ಕೇಂದ್ರ ಸಚಿವ ಶ್ರೀಪಾದ ನಾಯಕ, ಗೋವಾ ರಾಜ್ಯ ಪ್ರವಾಸೋದ್ಯಮ ಸಚಿವ ರೋಹನ್ ಖಂವಟೆ, ರಾಜ್ಯಸಭಾ ಸದಸ್ಯ ಸದಾನಂದ ತಾನಾವಡೆ, ಎನ್ ಆರ್ ಐ ಕಮೀಶನರ್ ನರೇಂದ್ರ ಸಾವೈಕರ್, ಕಲಂಗುಟ್ ಶಾಸಕ ಮೈಕಲ್ ಲೋಬೊ, ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ, ಕರ್ನಾಟಕ ತಾಂಡಾ ನಿಯಮಿತ ನಿಗಮದ ಅಧ್ಯಕ್ಷ ಎನ್.ಜಯದೇವ ನಾಯಕ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ್, ಬಿಟೋನಾ ಗ್ರಾ.ಪಂ ಸದಸ್ಯ ರಾಜ ಶಿರೋಡಕರ್, ಕೇಂದ್ರ ಕಿಸಾನ ಸಮಿತಿಯ ನಿರ್ದೇಶಕ ರಾಜು.ಆರ್.ಎಸ್, ಲೋಕಸೇವಾ ಆಯೋಗದ ಮಾಜಿ ಸದಸ್ಯ ಕೆ.ಮುಕಡಪ್ಪ ಸೇರಿದಂತೆ ಗೋವಾದ ವಿವಿಧ ಕನ್ನಡಪರ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿರುವರು.
ಸಭಾ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, ಈ ಎಲ್ಲ ಕಾರ್ಯಕ್ರಮಗಳಿಗೆ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಗೋವಾ ಕರ್ನಾಟಕ ರಾಜ್ಯೋತ್ಸವ ಸಮಿತಿ ಪ್ರಕಟಣೆಯಲ್ಲಿ ಕೋರಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ