ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನಲ್ಲಿ ಐಕ್ಯೂಎಸಿ ಆಶ್ರಯದಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದಿಂದ ನವೆಂಬರ್ 14 ರಿಂದ 20ರ ವರೆಗೆ ನಡೆಯುವ ಗ್ರಂಥಾಲಯ ಸಪ್ತಾಹದ ಉದ್ಘಾಟನೆ ಕಾರ್ಯಕ್ರಮ ಜರಗಿತು.
ಉದ್ಘಾಟನೆಗೈದ ತೆಂಕನಿಡಿಯೂರು ಸರಕಾರಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥಕರಬ ಪುಸ್ತಕ ಪ್ರೀತಿಜ್ಞಾನದಕಣ್ಣು ತೆರಿಸಿ ಜೀವನ ಮಾರ್ಗವನ್ನು ಬದಲಾಯಿಸಬಲ್ಲುದು. ಜಗತ್ತನ್ನೇ ಒಬ್ಬ ಸೂರ್ಯ ಬೆಳಗಿದರೆ ಒಂದು ಪುಸ್ತಕ ನಮ್ಮ ಬದುಕನ್ನು ಬೆಳಗ ಬಲ್ಲುದು ಅಂಬೇಡ್ಕರ್ ಮಾರ್ಕ್ ನಂತಹ ಮಹಾನ್ ಮಾನವತಾವಾದಿಗಳು ಮಹಾನ್ ಪುಸ್ತಕ ಪ್ರೇಮಿಗಳಾಗಿದ್ದು ಇಡೀ ಜಗತ್ತನ್ನೇ ಬದಲಾಯಿಸುವ ಚಿಂತನೆಗಳನ್ನು ನಮಗೆ ನೀಡಿದ್ದರು. ಯುವಜನತೆಯಲ್ಲಿ ಪುಸ್ತಕ ಓದುವ ಹವ್ಯಾಸ ಅವರಲ್ಲಿ ಮುಕ್ತ ಆಲೋಚನೆಗಳನ್ನು ಹುಟ್ಟು ಹಾಕಿ ಆತ್ಮಬಲವನ್ನು ಹೆಚ್ಚಿಸುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ ಇಂದಿನ ಯುವಜನತೆ ಗ್ರಂಥಾಲಯ ಬಳಕೆಯನ್ನು ಹೆಚ್ಚಾಗಿ ಮಾಡದಿರುವುದೇ ಕೆಲವೊಂದು ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಆದ್ದರಿಂದ ಗ್ರಂಥಾಲಯದ ಸೌಲಭ್ಯಗಳನ್ನು ಬಳಸಿಕೊಂಡು ತಮ್ಮ ವೃತ್ತಿ ಭವಿಷ್ಯ ರೂಪಿಸಿಕೊಳ್ಳುವಂತೆ ಸೂಚಿಸಿದರು. ಸ್ನಾತಕೋತ್ತರ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಘು ನಾಯ್ಕ, ಐಕ್ಯೂಎಸಿ ಸಂಚಾಲಕ ಡಾ. ಮೇವಿ ಮಿರಾಂದ, ಕಾರ್ಯಕ್ರಮ ಸಂಯೋಜಕ ಗ್ರಂಥಪಾಲಕ ಶ್ರೀಕೃಷ್ಣ ಸಾಸ್ತಾನ, ಗ್ರಂಥಾಲಯ ಸಹಾಯಕಿ ಶ್ರೀಮತಿ ಪ್ರಮೀಳಾ, ಬೋಧಕ/ಬೋಧಕೇತರ ವೃಂದದವರು, ಸ್ನಾತಕೋತ್ತರ ಮತ್ತು ಪದವಿ ವಿದ್ಯಾರ್ಥಿಗಳು ಭಾಗಿಯಾದರು.
ಗ್ರಂಥಾಲಯ ಸಪ್ತಾಹದ ಅಂಗವಾಗಿ ರಸಪ್ರಶ್ನೆ, ಪುಸ್ತಕ ಪ್ರದರ್ಶನ, ಪದಬಂಧ, ಪ್ರಬಂಧ ಸ್ಪರ್ಧೆ ಇತ್ಯಾದಿಗಳನ್ನು ಏರ್ಪಡಿಸಲಾಗಿದೆ. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರ ಪ್ರಶಾಂತ ಎನ್. ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ