ಓದುಗರಿಗೆ ರಾಮಚಂದ್ರ ರಾವ್ ಅವರ ಪುಸ್ತಕಗಳು ಲಭ್ಯವಾಗಲಿ: ರಾಮೇಗೌಡ

Upayuktha
0


ಬೆಂಗಳೂರು: ನಳಂದದ ಪಾಲಿ ಇನ್‌ಸ್ಟಿಟ್ಯೂಟ್‌, ಬಿ.ಎಂ.ಶ್ರೀ. ಪ್ರತಿಷ್ಠಾನ ಹಾಗೂ ಪ್ರೊ. ಎಸ್.ಕೆ. ರಾಮಚಂದ್ರರಾವ್ ಮೆಮೋರಿಯಲ್ ಟ್ರಸ್ಟ್‌ ಆಯೋಜಿಸಿದ್ದ ಪ್ರೊ. ಎಸ್‌.ಕೆ. ರಾಮಚಂದ್ರರಾವ್‌ ಅವರ ಬೌದ್ಧ ಸಾಹಿತ್ಯ ಕೃತಿಗಳು ವಿಚಾರ ಸಂಕಿರಣ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಅತಿಥಿಯಾಗಿ ಭಾಗವಹಿಸಿದ್ದ ಬಿ.ಎಂ.ಶ್ರೀ. ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ಮಾತನಾಡಿ, "ವಿದ್ವಾಂಸ ಎಸ್‌.ಕೆ. ರಾಮಚಂದ್ರರಾವ್‌ ಅವರ ಕೃತಿಗಳು ಶತಮಾನೋತ್ಸವದ ಸಂದರ್ಭದಲ್ಲಾದರೂ ಎಲ್ಲ ಓದುಗರಿಗೆ ಲಭ್ಯವಾಗುವಂತೆ ಮಾಡಬೇಕು. ಅವರು ಲೋಕೋಪಕಾರಕ್ಕೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಸಂಸ್ಕೃತ, ವೇದ ಅಭ್ಯಾಸ ಜತೆಗೆ ಬೌದ್ಧ, ಜೈನ ಧರ್ಮದ ಬಗ್ಗೆ ಅಧ್ಯಯನ ಮಾಡಿದ್ದರು. ಧರ್ಮಗಳ ನಡುವೆ ದ್ವೇಷ ನಡೆಯುತ್ತಿರುವಾಗ ಅನ್ಯ ಧರ್ಮಗಳಲ್ಲಿ ಏನಿದೆ ಎಂದು ತಿಳಿಯಲು ಅಧ್ಯಯನ ಮಾಡಿದ್ದರು" ಎಂದರು.


ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ವಿದ್ವಾಂಸ ಶತಾವಧಾನಿ ಡಾ.ಆರ್.ಗಣೇಶ್, "ಪಾಲಿ ಭಾಷೆಯಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ರಾಮಚಂದ್ರರಾವ್‌, ಬೌದ್ಧ ಧರ್ಮದ ಮೂಲ ಕೃತಿಗಳ ಅಧ್ಯಯನ ನಡೆಸಿದ್ದರು. ಜಾನಪದ ಕತೆಗಳ ಹೊರತಾಗಿ ಮೂಲ ಗ್ರಂಥಗಳ ವಿಷಯವನ್ನು ಕನ್ನಡ ಹಾಗೂ ಇಂಗ್ಲಿಷ್‌ ಭಾಷೆಯ ಕೃತಿಗಳಲ್ಲಿ ಪ್ರಸುತಪಡಿಸಿದ್ದಾರೆ. ಅಲ್ಲದೇ ಬುದ್ಧ ಮಾತನಾಡಿದ ಭಾಷೆಯಲ್ಲಿ ಬರೆಯಬೇಕೆಂದು ಪಾಲಿ ಭಾಷೆಯಲ್ಲಿ ಜ್ಞಾನ ಭರಿತವಾದ ಕೃತಿ ರಚಿಸಿರುವುದು ಇವರ ವಿದ್ವತ್‌ಗೆ ಸಾಕ್ಷಿ," ಎಂದು ಹೇಳಿದರು.


ಪಾಲಿ ಇನ್‌ಸ್ಟಿಟ್ಯೂಟ್‌ ಅಧ್ಯಕ್ಷ ರಾಹುಲ್ ಎಂ.ಖರ್ಗೆ, ಬಹುಭಾಷಾ ವಿದ್ವಾಂಸ ಮಲ್ಲೇಪುರಂ ಜಿ ವೆಂಕಟೇಶ್ ಹಾಜರಿದ್ದರು. ವಿದ್ವಾಂಸ ಮೊಳಕಾಲ್ಮುರು ಶ್ರೀನಿವಾಸಮೂರ್ತಿ, ಸಂಸ್ಕೃತಿ ಚಿಂತಕ ಜಿ.ಬಿ.ಹರೀಶ್, ಸಹ ಪ್ರಾಧ್ಯಾಪಕಿ ಎಸ್.ಪೂರ್ಣಿಮಾ ವಿಷಯ ಮಂಡಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top