ಕಾರ್ಕಳ: 'ಕನ್ನಡ ಭಾಷೆ, ಸಂಸ್ಕೃತಿ, ಜನಪದ ಕಲೆಗಳ ಇತಿಹಾಸ ಹಾಗೂ ಮಹತ್ವವನ್ನು ಯುವಜನತೆ ಅರಿತುಕೊಳ್ಳುವುದು ಅಗತ್ಯ. ಕನ್ನಡವನ್ನು ಉಳಿಸಬೇಕು-ಬೆಳೆಸಬೇಕು ಎನ್ನುವ ಬದಲು ಕನ್ನಡವನ್ನು ಹೆಚ್ಚಾಗಿ ಬಳಸುವುದು ಅಗತ್ಯ' ಎಂದು ನಟ, ಹಿನ್ನಲೆ ಧ್ವನಿ ಕಲಾವಿದ, ನಿರೂಪಕ ಬಡೆಕ್ಕಿಲ ಪ್ರದೀಪ್ ಅಭಿಪ್ರಾಯಪಟ್ಟರು.
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದವು ಕಾಲೇಜಿನ ಐಸಿರಿ ಕನ್ನಡ ಸಮಿತಿಯ ಸಹಯೋಗದಲ್ಲಿ ನ.೬ ರಂದು ಹಮ್ಮಿಕೊಳ್ಳಲಾದ 'ದಿವ್ಯಾಂಕುರ' ಕನ್ನಡ ರಾಜ್ಯೋತ್ಸವ ಸಮಾರಂಭ ಹಾಗೂ ಸಾಂಪ್ರದಾಯಿಕ ದಿನಾಚರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಉಪಪ್ರಾಂಶುಪಾಲ ಡಾ.ಐ ಆರ್ ಮಿತ್ತಂತಾಯ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ 'ನಿಟ್ಟೆ ತಾಂತ್ರಿಕ ಕಾಲೇಜು ಪ್ರತಿವರ್ಷವೂ ಕನ್ನಡ ರಾಜ್ಯೋತ್ಸವವನ್ನು ಬಹಳ ವಿಜ್ರಂಭಣೆಯಿಂದ ಆಚರಿಸುತ್ತಾ ಬಂದಿದೆ. ವ್ಯಾವಹಾರಿಕ ದೃಷ್ಠಿಯಿಂದ ವಿವಿಧ ಭಾಷೆಗಳನ್ನು ಕಲಿಯುವುದು ಅಗತ್ಯವಾದರೂ ಕನ್ನಡವನ್ನು ನಾವು ಎಂದಿಗೂ ಮರೆಯಬಾರದು. ವಿದ್ಯಾರ್ಥಿಗಳಲ್ಲಿ ಸಂಭ್ರಮಾಚರಣೆಯಂತಹ ಕಾರ್ಯಕ್ರಮಗಳ ಆಯೋಜನೆಯಲ್ಲಿ ಇರುವ ಆಸಕ್ತಿ ಶ್ಲಾಘನೀಯ' ಎಂದು ಹೇಳಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಾಲೇಜಿನಲ್ಲಿ ನಡೆಸಲಾದ ಹಲವಾರು ಸ್ಪರ್ಧೆಗಳ ವಿಜೇತರಿಗೆ ಇದೇ ಸಂದರ್ಭದಲ್ಲಿ ಬಹುಮಾನ ಹಾಗೂ ಪ್ರಮಾಣಪತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಅವಂತಿ ಸ್ವಾಗತಿಸಿದರು. ಐಸಿರಿ ಕನ್ನಡ ಸಮಿತಿಯ ವಿದ್ಯಾರ್ಥಿ ನಾಯಕಿ ಸುರಭಿ ಎಸ್ ಶೆಟ್ಟಿ ವಂದಿಸಿದರು. ಸ್ಟೂಡೆಂಟ್ ವೆಲ್ಫೇರ್ ಡೀನ ಡಾ.ನರಸಿಂಹ ಬೈಲ್ಕೇರಿ ಕಾರ್ಯಕ್ರಮವನ್ನು ಸಂಘಟಿಸಿದರು. ವಿದ್ಯಾರ್ಥಿನಿ ಖ್ಯಾತಿ ಕಾರ್ಯಕ್ರಮ ನಿರೂಪಿಸಿದರು.
ಸಭಾಕಾರ್ಯಕ್ರಮದ ಅನಂತರ ತಾಲೀಮ್, ಸ್ಟೀರಿಯೊ ಕ್ಲಬ್, ಕಲಾಸಂಗಮ, ಲಿಕ್ವಿಡ್ ಗೋಲ್ಡ್ ಮತ್ತು ಕಲಾಂಜಲಿ ವಿದ್ಯಾರ್ಥಿ ಸಂಘದ ಸದಸ್ಯರು ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಪ್ರದರ್ಶಿಸಿದರು. ವಿದ್ಯಾರ್ಥಿಗಳಾದ ಐಶ್ವರ್ಯ ಜೈನ್ ಹಾಗೂ ಸಂಗಮೇಶ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ