ದೈನಂದಿನ ಪ್ರಾರ್ಥನೆ ಸರಸ್ವತಿ ವಂದನೆಯಲ್ಲಿ ಭಾಗಿ
ಪುತ್ತೂರು: ವಿವೇಕಾನಂದ ಪದವಿಪೂರ್ವಕಾಲೇಜಿನ ಹಿರಿಯ ವಿದ್ಯಾರ್ಥಿ ಪ್ರಸ್ತುತ ಅಮೆರಿಕದಲ್ಲಿ ಸಾಫ್ಟ್ ವೇರ್ಇಂಜಿನಿಯರ್ ಆಗಿ ಉದ್ಯೋಗ ನಡೆಸುತ್ತಿರುವ ಕಡಮಜಲು ವಿಪುಲ್ ಎಸ್ರೈ ಇವರು ವಿವೇಕಾನಂದ ಪದವಿ ಪೂರ್ವಕಾಲೇಜಿಗೆ ಇತ್ತೀಚೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿಇವರು ಕಾಲೇಜಿನ ದೈನಂದಿನ ಪ್ರಾರ್ಥನೆಯಾದ ಸರಸ್ವತಿ ವಂದನೆಯಲ್ಲಿ ದೀಪ ಪ್ರಜ್ವಲಿಸಿದರು ಹಾಗೂ ವಿದ್ಯಾರ್ಥಿಗಳೊಂದಿಗೆ ಪ್ರಾರ್ಥನೆಯಲ್ಲಿ ಭಾಗವಹಿಸಿದರು.
ನಂತರ ಮಾತನಾಡಿದ ಅವರು "ವಿವೇಕಾನಂದ ಪದವಿಪೂರ್ವಕಾಲೇಜು, ನನ್ನಂತಹಅದೆಷ್ಟೋ ವಿದ್ಯಾರ್ಥಿಗಳಿಗೆ ದಾರಿದೀಪವಾಗಿದೆ. ಇಲ್ಲಿ ಇಂದು ಸರಸ್ವತಿ ವಂದನೆಯಲ್ಲಿ ಭಾಗವಹಿಸುತ್ತಿರುವ ಸಂದರ್ಭದಲ್ಲಿ ನನಗೆ ನನ್ನಕಾಲೇಜಿನ ದಿನಗಳು ನನಗೆ ಮರುಕಳಿಸುತ್ತಿವೆ. ಮತ್ತೊಮ್ಮೆ ಈ ವಿದ್ಯಾಸಂಸ್ಥೆಗೆ ಆಗಮಿಸಿ ಇಲ್ಲಿನ ವಿದ್ಯಾರ್ಥಿಗಳೊಂದಿಗೆ ಪ್ರಾರ್ಥನೆಯಲ್ಲಿ ಭಾಗವಹಿಸುವ ಅವಕಾಶ ನೀಡಿದ್ದಕ್ಕೆ ನಾನು ಸಂಸ್ಥೆಯಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಮತ್ತು ನನಗೆ ಮಾರ್ಗದರ್ಶನ ನೀಡಿದ ಎಲ್ಲಾ ಗುರು ವೃಂದದವರನ್ನು ಸ್ಮರಿಸುತ್ತಾ ಅವರಿಗೆ ವಂದಿಸುತ್ತೇನೆ" ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿವೇಕಾನಂದ ಪದವಿಪೂರ್ವಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದರವೀಂದ್ರ ಪಿ., ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ INNONXT ಸಂಸ್ಥೆಯ ಡಾ. ಅನು ಉಪಸ್ಥಿತರಿದ್ದರು. ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ದೈನಂದಿನ ಪ್ರಾರ್ಥನೆಯಲ್ಲಿ ಭಾಗವಹಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ