ಪಾಣೆಮಂಗಳೂರಿನಲ್ಲಿ ರಾಜ್ಯೋತ್ಸವ ಆಚರಣೆ

Upayuktha
0

ಜಯಾನಂದ ಪೆರಾಜೆಗೆ ಗೌರವ ಪುರಸ್ಕಾರ



ಬಂಟ್ವಾಳ: ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಪಾಣೆಮಂಗಳೂರು ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಎನ್. ನರೇಂದ್ರನಾಥ ಕುಡ್ವ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಸಭಾ ಕಾರ್ಯಕ್ರಮದಲ್ಲಿ ದೀಕ್ಷಾ ಮತ್ತು ಬಳಗದವರು ನಾಡಗೀತೆ ಹಾಡಿ, ಕರ್ನಾಟಕ ಭೂಪಟಕ್ಕೆ ಸಾಂಕೇತಿಕವಾಗಿ 69 ದೀಪಗಳನ್ನು ಹಚ್ಚಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು.


ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಯಾನಂದ ಪೆರಾಜೆ ಅವರು ಮಾತನಾಡಿ ಕನ್ನಡ ನಾಡು, ನುಡಿ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕನ್ನಡದ ಹಿರಿಮೆ ಗರಿಮೆ, ಕನ್ನಡ ಪರಂಪರೆ ಕನ್ನಡವನ್ನು ಕಟ್ಟಿ ಬೆಳೆಸುವಲ್ಲಿ ಕಾರಣಿಭೂತರಾದ ಕನ್ನಡದ ಮಹಾನ್ ಕವಿಗಳು ಹಾಗೂ ದಕ್ಷಿಣ ಕನ್ನಡದ ಮತ್ತು ಬಂಟ್ವಾಳ ತಾಲೂಕಿನ ಮೇರು ಸಾಹಿತಿಗಳ ಸಾಧನೆಯನ್ನು ಪರಿಚಯಿಸಿದರು. ಮತ್ತೋರ್ವ ಅತಿಥಿ ಪಾಣೆಮಂಗಳೂರಿನ ಆಶಾ ಕಾರ್ಯಕರ್ತೆ ಜ್ಯೋತಿಲಕ್ಷ್ಮಿ ಅವರು ಉಪಸ್ಥಿತರಿದ್ದರು. ಸಂಚಾಲಕರು ಮತ್ತು ಅಧ್ಯಕ್ಷರು ಸನ್ಮಾನಿಸಿ, ಸ್ಮರಣಿಕೆ ನೀಡಿ ಅತಿಥಿಗಳನ್ನು ಗೌರವಿಸಿ ಸನ್ಮಾನ ಮಾಡಿದರು.


ಶಾಲಾ ಸಂಚಾಲಕ ಡಾ. ಪಿ. ವಿಶ್ವನಾಥ ನಾಯಕ್, ಮುಖ್ಯೋಪಾಧ್ಯಾಯ ಶಿವಪ್ಪ ನಾಯ್ಕ ಕನ್ನಡ ರಾಜ್ಯೋತ್ಸವದ  ಸಂದೇಶಗಳನ್ನು ತಿಳಿದರು. ನವ್ಯ ಬಳಗದವರು ಹಚ್ಚೇವು ಕನ್ನಡದ ದೀಪ ಹಾಡನ್ನು ಹಾಡಿದರು. ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ ಕವಯಿತ್ರಿ ಸುಧಾ ನಾಗೇಶ್, ಶಾಲಾ ನಾಯಕ ಮನ್ವಿತ್ ಸಿ. ಪೂಜಾರಿ ಉಪಸ್ಥಿತರಿದ್ದರು.


ಶಾಲಾ ಮುಖ್ಯ ಶಿಕ್ಷಕ ಶಿವಪ್ಪ ನಾಯ್ಕ ಸ್ವಾಗತಿಸಿ,ಕನ್ನಡ ಭಾಷಾ ಆಧ್ಯಾಪಕ ಧನರಾಜ್ ದೊಡ್ಡನೇರಳೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳಾದ ಶೈಮಾ ಪ್ರಶಸ್ತಿ ಪತ್ರ ವಾಚಿಸಿ, ಖತೀಜತುಲ್ ಸಹಬೀರ ಧನ್ಯವಾದವಿತ್ತರು. ಅಬ್ದುಲ್ ರಾಝಿಕ್ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top