ಕನ್ನಡದ ಹೆಸರಾಂತ ನಿರ್ದೇಶಕ, ನಟ ಗುರುಪ್ರಸಾದ್ ಆತ್ಮಹತ್ಯೆ

Upayuktha
0


ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ, ನಟ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಇರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.


ಗುರು ಪ್ರಸಾದ್ ನಿರ್ದೇಶಿಸಿದ್ದ, ನವರಸನಾಯಕ ಜಗ್ಗೇಶ್ ಅಭಿನಯದ ಮಠ ಸಿನಿಮಾ ಭಾರಿ ಜನಪ್ರಿಯತೆ ಪಡೆದುಕೊಂಡಿತ್ತು. ಹಲವಾರು ಸಿನಿಮಾಗಳಲ್ಲಿ ನಟನಾಗಿ, ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ್ದ ಗುರುಪ್ರಸಾದ್, ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 


ಗುರುಪ್ರಸಾದ್ ಇತ್ತೀಚೆಗೆ ಎರಡನೇ ವಿವಾಹವಾಗಿದ್ದರು. ವಿವಾಹದ ಬಳಿಕ ಮಾದನಾಯಕನಹಳ್ಳಿ ಬಳಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.


ಗುರುಪ್ರಸಾದ್ ಮಠ, ಎದ್ದೇಳು ಮಂಜುನಾಥ್, ಡೈರೆಕ್ಟರ್ ಸ್ಪೆಷಲ್, ರಂಗನಾಯಕ, ಎರಡನೇ ಸಲ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದರು. ಅವರ ನಿರ್ದೇಶನದ ಅಡೆಮಾ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಈ ಮಧ್ಯೆಯೇ ಗುರುಪ್ರಸಾದ್ ನೇಣಿಗೆ ಶರಣಾಗಿದ್ದು, ಕನ್ನಡ ಚಿತ್ರರಂಗಕ್ಕೆ ಆಘಾತ ಎದುರಾಗಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಆರು ವರ್ಷದ ಹಿಂದೆ ಗುರು ಪ್ರಸಾದ್ ತಮ್ಮ ಮೊದಲನೇ ಪತ್ನಿ ಆರತಿ ಅವರಿಂದ ದೂರವಾಗಿದ್ದರು. ಹೆಚ್ಚು ಕಡಿಮೆ ಹದಿನಾರು ವರ್ಷ ಜೊತೆಯಾಗಿ ಸಂಸಾರ ನಡೆಸಿದ ಗುರು ಪ್ರಸಾದ್ ತಮ್ಮ ಪತ್ನಿಯ ಜೊತೆ ಸಂಬಂಧ ಕಡಿದುಕೊಂಡಿದ್ದರು. ಕೆಲವು ವರ್ಷಗಳ ನಂತರ ಸುಮಿತ್ರಾ ಎಂಬವರನ್ನು ಎರಡನೇ ಮದುವೆಯಾಗಿ ಸಂಸಾರ ನಡೆಸಿದರು. ಕಾಲಕ್ರಮೇಣ ಈ ಮದುವೆಯೂ ಅವರ ಪಾಲಿಗೆ ಕಹಿಯಾಗಿ ಪರಿಮಿಸಿತು ಎಂದು ಅವರನ್ನು ಸಮೀಪದಿಂದ ಬಲ್ಲ ಮೂಲಗಳು ಹೇಳುತ್ತವೆ.


ಕೌಟುಂಬಿಕ ಜೀವನದ ವಿಪ್ಲವಗಳು, ಸಾಲಗಾರರ ಕಾಟದಿಂದ ಸೋತು ಹೋಗಿದ್ದ ಗುರು ಪ್ರಸಾದ್ ಅಂತಿಮವಾಗಿ ತಮ್ಮ ಸಂಕಟಗಳಿಂದ ಪಾರಾಗಲು ಆತ್ಮಹತ್ಯೆ ಮಾರ್ಗ ಹಿಡಿದುದು ಮಾತ್ರ ಅವರ ಅಭಿಮಾನಿಗಳಿಗೆ ಮತ್ತು ಕನ್ನಡ ಚಿತ್ರರಂಗಕ್ಕೆ ಬಹುದೊಡ್ಡ ಆಘಾತವೇ ಸರಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top