ಸಂಡೂರು ಉಪ ಚುನಾವಣೆ: ಕಾಂಗ್ರೆಸ್ ಭರ್ಜರಿ ಪ್ರಚಾರ

Upayuktha
0


ಸಂಡೂರು: ಸಂಡೂರು ಕ್ಷೇತ್ರದ ವಿಧಾನ ಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು, ಕ್ಷೇತ್ರದ ವಿವಿಧೆಡೆ ಪ್ರಚಾರ ಆರಂಭಿಸಿದರು.  ಕ್ಷೇತ್ರದ ರಣಜಿತ್ ಪುರ, ವಿಠ್ಠಲನಗರ ಹಾಗೂ ನರಸಿಂಗಾಪುರದಲ್ಲಿ ಭರ್ಜರಿ ಪ್ರಚಾರ ಆರಂಭಿಸಿದರು. ವಿಠ್ಠಲನಗರದಲ್ಲಿ ಚುನಾವಣಾ ಪ್ರಚಾರದ ವೇಳೆ ಗ್ರಾಮಸ್ಥರು ಅರಿಶಿಣ, ಕುಂಕುಮ ನೀಡಿ ಕಂಕಣ ಕಟ್ಟಿ ಸ್ವಾಗತಿಸಿದರು. 


ಈ ವೇಳೆ ಮಾತನಾಡಿದ ಅನ್ನಪೂರ್ಣ ಅವರು ಮತದಾರರ ಪ್ರೀತಿ, ವಿಶ್ವಾಸಕ್ಕೆ ಸದಾ ಋಣಿ ಎಂದರು. ರಣಜಿತ್ ಪುರದಲ್ಲಿ ಪ್ರಚಾರ ನಡೆಸಿದ ಅನ್ನಪೂರ್ಣ ಅವರು, ಕಾಂಗ್ರೆಸ್ ಗೆಲ್ಲಿಸುವಂತೆ ಮನವಿ ಮಾಡಿದರು. ಈ ವೇಳೆ ಅಪಾರ ಸಂಖ್ಯೆಯ ಕಾರ್ಯಕರ್ತರು ಮತ್ತು ಮುಖಂಡರು ಹಾಜರಿದ್ದರು. ನರಸಿಂಗಾಪುರದಲ್ಲಿ ಮತಯಾಚನೆ ವೇಳೆ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಕ್ಷೇತ್ರದ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top