ಪೆರಾಜೆ ಮಠದಲ್ಲಿ ಪ್ರತಿಭಾ ಪ್ರದರ್ಶನ- ಕ್ರೀಡೋತ್ಸವ

Chandrashekhara Kulamarva
0


ಬಂಟ್ವಾಳ: ಉಪ್ಪಿನಂಗಡಿ ವಲಯ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಮತ್ತು ಕ್ರೀಡೋತ್ಸವ ನ.3ರಂದು ಪೆರಾಜೆ ಮಾಣಿ ಮಠದಲ್ಲಿ ಜರಗಿತು.

ಉಪ್ಪಿನಂಗಡಿ ಹವ್ಯಕ ಮಂಡಲ ಗುರಿಕ್ಕಾರ ಶಂಕರ ಭಟ್ ಬಾಲ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ಜಾತಿ ಮತಗಳ‌‌ ವೈಭವೀಕರಣವಾಗುತ್ತಿದ್ದು ನಮ್ಮ ಅಸ್ತಿತ್ವಕ್ಕಾಗಿ ಸಂಘಟಿತರಾಗುವುದು ಅನಿವಾರ್ಯವಾಗಿದೆ. ಸಂಘಟನೆಗಾಗಿ ಕ್ರೀಡಾಕೂಟ‌‌ ಏರ್ಪಡಿಸಲಾಗಿದೆ‌ ಎಂದರು.


ಬಾಲಸುಬ್ರಹ್ಮಣ್ಯ ಭಟ್ ಸರ್ಪಮೂಲೆ ಮಾತನಾಡಿ ವೈದಿಕ, ಧಾರ್ಮಿಕ,‌ ಶಿಕ್ಷಕ ಹಾಗೂ ಮಾತೆಯರ ಸಮಾವೇಶಗಳು ಯಶಸ್ವಿಯಾಗಿ ನಡೆದಿದೆ.  ವಿದ್ಯಾರ್ಥಿ ಯುವಕರ ಒಗ್ಗೂಡಿಸಲು ಕಾರ್ಯಕ್ರಮ ನಡೆಯುತ್ತಿದೆ ಎಂದರು. ಕೇಶವ ಪ್ರಕಾಶ‌ ಎಂ. ಶುಭಹಾರೈಸಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಬೆಳ್ತಂಗಡಿ ಶ್ರೀಭಾರತಿ ಉರ್ವಾಲು ಶಾಲೆಯ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಪುರಸ್ಕರಿಸಲಾಯಿತು.


ಹಾರಕೆರೆ ನಾರಾಯಣ ಭಟ್, ಶೈಲಜಾ ಭಟ್ ಕೆ.ಟಿ ಮತ್ತಿತರರು ಉಪಸ್ಥಿತರಿದ್ದರು. ಮಹೇಶ ಸ್ವಾಗತಿಸಿದರು, ಅವನೀಶ ಪೆರಿಯಡ್ಕ ನಿರೂಪಿಸಿ ವಂದಿಸಿದರು. ಬಳಿಕ ಮಠದಲ್ಲಿ ಹಿರಿಯರಿಂದ ರುದ್ರ ಪಠಣ ನಡೆಯಿತು. ವಿದ್ಯಾರ್ಥಿಗಳ ಬೌದ್ಧಿಕ ಸ್ಪರ್ಧೆಗಳು, ಹೊರಾಂಗಣ ಮತ್ತು ಒಳಾಂಗಣ ಕ್ರೀಡೆಗಳು ಜರಗಿದವು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top