ಉಡುಪಿ: ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ಇಂದು (ನ. 08) ಜಯಲಕ್ಷ್ಮಿ ಸಿಲ್ಕ್ಸ್ ಬನ್ನಂಜೆ ಇಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. ಉಡುಪಿಯ ನಿಕಟಪೂರ್ವ ಶಾಸಕರು, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ ರಘುಪತಿ ಭಟ್ ಅವರು ಭಾಗವಹಿಸಿ ನವದುರ್ಗಾ ಲೇಖನ ಯಜ್ಞದ ಕುರಿತು ಸಂಪೂರ್ಣ ವಿವರಣೆ ನೀಡಿ ಈ ಯಜ್ಞದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ನವದುರ್ಗಾ ಲೇಖನ ಯಜ್ಞ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಬಾಲಾಜಿ, ಜಯಲಕ್ಷ್ಮಿ ಲಕ್ಷ್ಮಿ ಸಿಲ್ಕ್ ಮಾಲಕ ವೀರೇಂದ್ರ ಹೆಗ್ಡೆ, ರವೀಂದ್ರ ಹೆಗ್ಡೆ, ಕಾಪು ಪುರಸಭಾ ವಾರ್ಡ್ ಸಮಿತಿ ಪ್ರಧಾನ ಮಹಿಳಾ ಸಂಚಾಲಕಿ ಗೀತಾಂಜಲಿ ಸುವರ್ಣ, ಸಂಚಾಲಕ ಸುವರ್ಧನ್ ನಾಯಕ್, ಯೋಗೀಶ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ