ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಅಜ್ಜರಕಾಡಿನ ಜಿಲ್ಲಾ ಮೈದಾನದಲ್ಲಿ ನಾಳೆ ಗುರುವಾರ (ಡಿ.12) ಆಯೋಜಿಸಲಾಗಿದೆ.
ನಾಲ್ಕು ಪ್ರಮುಖ ಗತಿವಿಧಿಗಳ ಮೂಲಕ ವಿವಿಧ ಕೇತ್ರದಲ್ಲಿ ಕಾರ್ಯ ನಿರ್ವಹಿಸುವ ಎಬಿವಿಪಿ ಈ ಬಾರಿ ಅಖಿಲ ಭಾರತ ಮಟ್ಟದಲ್ಲಿ ಖೇಲೋ ಭಾರತ್ ಗತಿವಿಧಿ ಮೂಲಕ ಕ್ರೀಡಾ ಚಟುವಟಿಕೆಯನ್ನು ಬ್ರಹತ್ ಮಟ್ಟದಲ್ಲಿ ಕೈಗೊಳ್ಳುತ್ತಿದೆ.
ಉಡುಪಿಯಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ 100, 200, 400, 800 ಹಾಗೂ 1500 ಮೀಟರ್ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಜಾವಲಿನ್ ಥ್ರೋ, ಶಾಟ್ ಪುಟ್, ಡಿಸ್ಕಸ್ ಥ್ರೋ, ಮತ್ತು ರಿಲೇ ಸ್ಪರ್ಧೆಗಳನ್ನು ಒಳಗೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ