ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ 'ಜ್ಞಾನ ದೀಪ' ಕಾರ್ಯಕ್ರಮದ ಅಡಿಯಲ್ಲಿ ಬೆಳ್ತಂಗಡಿ ತಾಲೂಕಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ತಿಮ್ಮಣಬೆಟ್ಟು ಇಲ್ಲಿಗೆ ಹತ್ತು ಡೆಸ್ಕ್ ಮತ್ತು ಬೆಂಚ್ ಕೊಡುಗೆಯಾಗಿ ನೀಡಿದೆ. ಇದರ ಹಸ್ತಾಂತರ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಸಮಿತಿಯ ಅಧ್ಯಕ್ಷರಾದ ರಾಮದಾಸ್ ನಾಯಕ್ ಹಾಗೂ ವಲಯದ ಮೇಲ್ವಿಚಾರಕಿ ಶಾಲಿನಿ ಮತ್ತು ಒಕ್ಕೂಟದ ಪದಾಧಿಕಾರಿಗಳು ಹಾಗೂ ಶಾಲಾ ಮುಖ್ಯೋಪಾಧ್ಯಾಯ ಸಚಿನ್ ಮತ್ತು ಶಾಲಾ ಶಿಕ್ಷಕ ವೃಂದ ಇವರ ಉಪಸ್ಥಿತಿಯಲ್ಲಿ ಹಸ್ತಾಂತರಿಸಲಾಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ