ಧರ್ಮಸ್ಥಳದಲ್ಲಿ ಮಂಜೂಷಾ ವಸ್ತುಸಂಗ್ರಹಾಲಯಕ್ಕೆಎಸ್.ಎಂ. ಕೃಷ್ಣ ಮತ್ತು ಪತ್ನಿ ಪ್ರೇಮಾಕೃಷ್ಣ ಭೇಟಿ ನೀಡಿದಾಗ, ಡಿ. ವೀರೇಂದ್ರ ಹೆಗ್ಗಡೆಯವರು ಮಾಹಿತಿ ನೀಡುತ್ತಿರುವುದು.
ಎಸ್.ಎಂ. ಕೃಷ್ಣ ಧರ್ಮಸ್ಥಳಕ್ಕೆ ಭೇಟಿ ನೀಡಿಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಡನೆ ಮಾತುಕತೆ ನಡೆಸುತ್ತಿರುವುದು.
ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ಎಂ.ಕೃಷ್ಣ ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು.
ಮಹಾಮೇಧಾವಿಯಾಗಿದ್ದಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಅವಧಿಯಲ್ಲಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಅನೇಕ ಪ್ರಗತಿಪರ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದರು. ದಕ್ಷ ಆಡಳಿದಾರರಾಗಿದ್ದ ಅವರು ಶಿಸ್ತಿನ ಸಿಪಾಯಿಯಾಗಿ, ಉತ್ತಮ ವಾಗ್ಮಿಯಾಗಿ, ಮತ್ತು ಹಿರಿಯರಾಜಕೀಯ ಮುತ್ಸದ್ಧಿಯಾಗಿ ಚಿರಪರಿಚಿತರಾಗಿದ್ದರು. ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ, ಮಹಾರಾಷ್ಟ್ರ ರಾಜ್ಯಪಾಲರಾಗಿ, ಕೇಂದ್ರಸರ್ಕಾರದ ವಿದೇಶಾಂಗ ಸಚಿವರಾಗಿ ಅಪಾರ ಅನುಭವ ಮತ್ತು ಪರಿಣತಿ ಹೊಂದಿದ್ದರು.
ಧರ್ಮಸ್ಥಳದ ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ನಮ್ಮಕ್ಷೇತ್ರದ ಅನೇಕ ಸಮಾರಂಭಗಳಲ್ಲಿ ಭಾಗವಹಿಸಿ ಪ್ರೋತ್ಸಾಹಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇರಿದಂತೆ ನಮ್ಮಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರ ನೀಡಿದ್ದಾರೆ ಅವರ ಆತ್ಮಕ್ಕೆ ಚಿರ ಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ.
-ಡಿ. ವೀರೇಂದ್ರ ಹೆಗ್ಗಡೆಯವರು
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ