ಸರಕಾರಿ ಪ್ರೌಢ ಶಾಲೆ ಅತ್ತಾವರ: ಮಂಗಳೂರು ದಕ್ಷಿಣ ವಲಯದ ವಾರ್ಷಿಕ ಕ್ರೀಡಾಕೂಟ

Upayuktha
0


ಮಂಗಳೂರು: ಸರಕಾರಿ ಪ್ರೌಢ ಶಾಲೆ ಅತ್ತಾವರ ಮಂಗಳೂರು ದಕ್ಷಿಣ ವಲಯದ ವಾರ್ಷಿಕ ಕ್ರೀಡಾಕೂಟ ಅತ್ತಾವರ ಶಾಲಾ ಮೈದಾನದಲ್ಲಿ ಮಂಗಳವಾರ ನಡೆಯಿತು. ಅತ್ತಾವರ ಚಕ್ರಪಾಣಿ ದೇವಸ್ಥಾನದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಭಟ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.


ಮಂಗಳೂರು ಪೂರ್ವ ರೋಟರಿ ಕ್ಲಬ್ ನಿಕಟ ಪೂರ್ವ ಅಧ್ಯಕ್ಷ ಜಯರಾಮ ಶೆಟ್ಟಿ ಮಾತನಾಡಿ ಕ್ರೀಡೆಯಲ್ಲಿ ಸೋಲು ಗೆಲುವು ಒಂದು ನಾಣ್ಯದ ಎರಡು ಮುಖ ಇದ್ದಂತೆ. ಕ್ರೀಡಾ ಸ್ಪೂರ್ತಿಯಿಂದ ಆಡಬೇಕು ಹಾಗೂ ಮಾದಕ ವ್ಯಸನದಿಂದ ದೂರ ಇದ್ದರೆ ಉತ್ತಮ ಜೀವನ ಕಟ್ಟಬಹುದು ಎಂದರು.

ಮಂಗಳೂರು ಲೇಡಿಹಿಲ್ ಲಯನ್ಸ್ ಕ್ಲಬ್ ಅಧ್ಯಕ್ಷ ಲಿಡಿಯಾ ಡಿಕೋಷ್ಟ ಧ್ವಜಾರೋಹಣಗೈದರು. ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಮರೀನಾ ಕ್ರೀಡಾ ಕ್ರೀಡಾಜ್ಯೋತಿ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಮಕ್ಕಳಿಂದ ಪಥ ಸಂಚಲನ ನಡೆಯಿತು.


ರೋಟರಿ ಕ್ಲಬ್ ಮಾಜಿ ಸಹಾಯಕ ರಾಜ್ಯಪಾಲ ಸದಾಶಿವ ಶೆಟ್ಟಿ ಸಾಂದರ್ಭಿಕವಾಗಿ ಮಾತನಾಡಿದರು. ಅತ್ತಾವರ ಪ್ರೌಢ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪಕೀರ್ ನಾಯಕ್, ಅತ್ತಾವರ  ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹಮ್ಮದ್ ಖಾಸಿಂ, ರೋಟರಿ ಕ್ಲಬ್ ಪದಾಧಿಕಾರಿ ವಿನೋದ್ ಕುಡ್ವಾ, ಅತ್ತಾವರ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಾಯಾ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮರ್ಸಿ ವೀಣಾ ಡಿಸೋಜ, ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಮರೀನಾ, ಅತ್ತಾವರ ಶಾಲೆಯ ದಾನಿ ಜೂಡ್ ಫ್ಯೂಜಲ್, ಮಂಗಳೂರು ಲೇಡಿಹಿಲ್ ಲಯನ್ಸ್ ಕ್ಲಬ್ ಅಧ್ಯಕ್ಷ ಲಿಡಿಯಾ ಡಿಕೋಷ್ಟ ಅವರನ್ನು ಸನ್ಮಾನಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಬಿ.ರಾಘವೇಂದ್ರ ಸ್ವಾಗತಿಸಿದರು. ಬಿ.ಎಡ್ ಶಿಕ್ಷಾರ್ಥಿ ಮಹದೇವ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕಿ ಲಿಲ್ಲಿ ಪಾಯಸ್ ಪ್ರಾಸ್ತವಿಕವಾಗಿ ಮಾತನಾಡಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top