ವಿವೇಕಾನಂದ ಶಿಶುಮಂದಿರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಆರಂಭ

Upayuktha
0


ಪುತ್ತೂರು: ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದಲ್ಲಿ ಶುಕ್ರವಾರ (ಡಿ.6) ದೇವಾಲಯಗಳ ಸಂವರ್ಧನ ಸಮಿತಿ ವತಿಯಿಂದ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯನ್ನು ಆರಂಭಿಸಲಾಯಿತು 


ಕೃಷ್ಣವೇಣಿ ಪ್ರಸಾದ್ ಮುಳಿಯ ಇವರು ಹಿಂದೂ ಧಾರ್ಮಿಕ ಶಿಕ್ಷಣದ ಉದ್ದೇಶ ಮತ್ತು ಅದರ ವಿಶೇಷತೆಗಳನ್ನು ತಿಳಿಸಿದರು. ಬಳಿಕ ಶ್ಲೋಕವೊಂದರ ಅರ್ಥ, ದೈನಂದಿನ ಜೀವನದಲ್ಲಿ ಆಚಾರ- ವಿಚಾರಗಳು ವೈಜ್ಞಾನಿಕ ತಳಹದಿ ಮೇಲೆ ಪರಂಪರಾಗತವಾಗಿ ಹೇಗೆ ರೂಪುಗೊಂಡಿವೆ ಎಂಬುದನ್ನು ವಿವರಿಸಿ, ಭಜನೆಯನ್ನು ನಡೆಸಿಕೊಟ್ಟರು.


ಶಂಕರಿ ಶರ್ಮ ಇವರು ಕನ್ನಡದ ಭಗವದ್ಗೀತೆ ಎನಿಸಿಕೊಂಡಿರುವ ಡಿ.ವಿ.ಜಿ.ಯವರ ಕಗ್ಗವೊಂದನ್ನು ಪ್ರಸ್ತುತಪಡಿಸಿದರು. ಮುಂದೆ, ಅದರ ಅರ್ಥವನ್ನು ವಿವರಿಸುತ್ತಾ ಇಂದಿನ ಕಾಲಘಟ್ಟದಲ್ಲಿ ಅದರ ಅಗತ್ಯತೆಯನ್ನು ತಿಳಿಸಿದರು. ಬಳಿಕ ಪೌರಾಣಿಕ ಕಥೆಯೊಂದನ್ನು ಹೇಳಿ, ಅದರ ವಿಶೇಷತೆಯನ್ನು ವಿವರಿಸಿದರು.


ಶಿಶುಮಂದಿರದ ಆಡಳಿತ ಮಂಡಳಿಯಲ್ಲಿ ಕೋಶಾಧಿಕಾರಿಯಾಗಿರುವ ಶ್ರೀಮತಿ ಚಂದ್ರಪ್ರಭಾ ಅವರು ಭಗವದ್ಗೀತೆಯ ಮಹತ್ವವನ್ನು ತಿಳಿಸಿದರು. ಮಾತೃಭಾರತಿ ಸದಸ್ಯೆಯರಾದ ಶ್ರೀಮತಿ ಲಕ್ಷ್ಮೀಪ್ರಭ ಸ್ವಾಗತಿಸಿ, ಶ್ರೀಮತಿ ರಮ್ಯ ಧನ್ಯವಾದ ಸಮರ್ಪಿಸಿದರು. ಮುಖ್ಯ ಮಾತಾಜಿ ಶ್ರೀಮತಿ ರೇಖಾ ಕುಮಾರಿ, ಮಾತಾಜಿಯವರಾದ ಹರ್ಷಿತಾ, ದಿವ್ಯ ಮತ್ತು ಪದ್ಮಪ್ರಿಯ, ಪೋಷಕರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top