ಬಾಂಗ್ಲಾದಲ್ಲಿ ಇಸ್ಕಾನ್ ಸಂತ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ನಾಳೆ ಸಾಗರದಲ್ಲಿ ಬೃಹತ್ ಪ್ರತಿಭಟನೆ

Upayuktha
0


ಸಾಗರ: ಬಾಂಗ್ಲಾದೇಶದ ಹಿಂದೂ ಧಾರ್ಮಿಕ ಮುಖಂಡರು ಹಾಗೂ ಇಸ್ಕಾನ್ ಪ್ರಮುಖರಾದ ಶ್ರೀ ಚಿನ್ಮಯ ಕೃಷ್ಣದಾಸ ಪ್ರಭು ಅವರನ್ನು ಬಾಂಗ್ಲಾ ಸರಕಾರ ಬಂಧಿಸಿದ ಕ್ರಮವನ್ನು ಖಂಡಿಸಿ ಹಾಗೂ ಬಿಡುಗಡೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಸಾಗರದಲ್ಲಿ ನಾಳೆ (ಡಿ.4) ಆಯೋಜಿಸಲಾಗಿದೆ.


ಸಾಗರದ ಹಿಂದೂ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಬೆಳಗ್ಗೆ 11:00 ಗಂಟೆಗೆ  ಈ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಲಿದ್ದು, ಮಹಾಗಪತಿ ದೇವಸ್ಥಾನದಿಂದ ಉಪವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ಸಾಗಲಿದೆ.


ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಹಿಂದೂ ಹಿತರಕ್ಷಣಾ ಸಮಿತಿ ಖಂಡಿಸಿದ್ದು, ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.


ನಾಳಿನ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗರ, ಹೊಸನಗರ, ಸೊರಬ, ಶಿಕಾರಿಪುರ ತಾಲೂಕಿನ ಎಲ್ಲ ಹಿಂದೂ ಬಾಂಧವರು ಪಾಲ್ಗೊಳ್ಳಬೇಕೆಂದು ಹಿಂದೂ ಹಿತರಕ್ಷಣಾ ಸಮಿತಿ ವಿನಂತಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top