ಜನವರಿ 1 ಹೊಸ ವರ್ಷದಂದು ಮೈಸೂರು ವಿಜಯನಗರದ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಾಡು ವಿತರಣೆ
ಮೈಸೂರು: ಕಳೆದ ಹಲವಾರು ವರ್ಷಗಳಿಂದ ಅನೂಚಾನವಾಗಿ ನಡೆಸಿಕೊಂಡು ಬರುತ್ತಿರುವಂತೆ ಈ ವರ್ಷವೂ ಸಹ ನೂತನ ಕ್ಯಾಲೆಂಡರ್ ವರ್ಷಾರಂಭದ ಅಂಗವಾಗಿ ಜ.1ರಂದು ರಂದು ಬೆಳಗ್ಗೆ 04:00 ಗಂಟೆಯಿಂದ ಪ್ರಾರಂಭಿಸಿ ಶ್ರೀ ಯೋಗಾನರಸಿಂಹಸ್ವಾಮಿಯವರಿಗೆ ವಿಶೇಷ ಅಲಂಕಾರ ಸೇರಿದಂತೆ ವಿಶೇಷ ಉತ್ಸವಗಳು ನಡೆಯಲಿವೆ.
"ಶ್ರೀರಂಗ ಕ್ಷೇತ್ರ`` ಮಧುರೈ ಕ್ಷೇತ್ರಗಳಿಂದ ತರಿಸಿದ ವಿಶೇಷ 'ತೋಮಾಲೆ' ಮತ್ತು 'ಸ್ವರ್ಣಪುಷ್ಪ'ದಿಂದ ಶ್ರೀಸ್ವಾಮಿಗೆ 'ಸಹಸ್ರನಾಮರ್ಚನೆ' ಮತ್ತು ದೇವಾಲಯದ ಉತ್ಸವ ಮೂರ್ತಿಯಾದ ಶ್ರೀ ಮಲಯಪ್ಪನ್ ಸ್ವಾಮಿ, ಪದ್ಮಾವತಿ ಮತ್ತು ಮಹಾಲಕ್ಷ್ಮಿ ದೇವರಿಗೆ ದೇವಾಲಯದ ಆವರಣದಲ್ಲಿ ``ಏಕಾದಶ ಪ್ರಾಕಾರೋತ್ಸವ`` ಹಾಗೂ ಇಪ್ಪತ್ತು ಕ್ವಿಂಟಾಲ್ ಪುಳಿಯೋಗರೆ ನಿವೇದನೆ`` ಮತ್ತು ದೇವಾಲಯಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣಾ ಕಾರ್ಯಕ್ರಮವನ್ನು ಪರಮ ಪೂಜ್ಯ ನಾಡೋಜ ಪ್ರೊ. ಭಾಷ್ಯಂ ಸ್ವಾಮೀಜಿಯವರ ದಿವ್ಯ ನೇತೃತ್ವದಲ್ಲಿ ಏರ್ಪಡಿಸಲಾಗಿದೆ.
ಪ್ರಾರಂಭದಲ್ಲಿ ಅಂದರೆ 1994ನೇ ಇಸವಿಯಲ್ಲಿ ಅಂದಾಜು ಒಂದು ಸಾವಿರ ಲಡ್ಡು ವಿತರಣೆ ಮಾಡಲಾಗಿತ್ತು. ಇತ್ತೀಚಿನ ಕೆಲವು ವರ್ಷಗಳಿಂದ ಎರಡು ಲಕ್ಷ ಲಡ್ಡು ಪ್ರಸಾದವನ್ನು ಭಕ್ತಾದಿಗಳಿಗೆ ವಿತರಣೆ ಮಾಡಲಾಗುತ್ತದೆ.
ಈ ವರ್ಷವೂ ಸಹ ಇನ್ನೂ ಹೆಚ್ಚು ಅಂದರೆ ಎರಡು ಲಕ್ಷ ಲಡ್ಡುವನ್ನು ವಿತರಣೆ ಮಾಡಲು ದೇವಸ್ಥಾನ ವತಿಯಿಂದ ತಯಾರಿ ನಡೆಯುತ್ತಿದೆ. ಈ ವರ್ಷ ಅಂದಾಜು (2,000) ಗ್ರಾಂ ತೂಕದ (15,000) ಲಡ್ಡುಗಳು ಹಾಗೂ (150) ಗ್ರಾಂ ತೂಕದ (2 ಲಕ್ಷ) ಲಡ್ಡುಗಳನ್ನು ದೇವಾಲಯಕ್ಕೆ ಬರುವ ಎಲ್ಲಾ ಭಕ್ತಾದಿಗಳಿಗೆ ಯಾವುದೇ ಮತ ಮತ್ತು ಭೇದವಿಲ್ಲದೆ ಉಚಿತವಾಗಿ ವಿತರಿಸಲಾಗುವುದು.
ಲಡ್ಡು ಪ್ರಸಾದವನ್ನು ವಿಶೇಷವಾಗಿ 60 ಮಂದಿ ನುರಿತ ಬಾಣಸಿಗರಿಂದ ತಯಾರಿಸಲಾಗಿದ್ದು, ದಿನಾಂಕ: ಡಿ.20 ರಿಂದ ಪ್ರಾರಂಭಿಸಿ ಇಂದಿನ ವರೆಗೂ ಲಡ್ಡು ತಯಾರಿ ಕಾರ್ಯ ನಡೆದಿದೆ.
ಲಡ್ಡು ತಯಾರಿಕೆಗೆ ಬಳಸಿರುವ ಸಾಮಗ್ರಿಗಳು:
೧೦೦ ಕ್ವಿಂಟಾಲ್ ಕಡ್ಲೆಹಿಟ್ಟು, ೨೦೦ ಕ್ವಿಂಟಾಲ್ ಸಕ್ಕರೆ, ೧೦,೦೦೦ ಲೀಟರ್ ಖಾದ್ಯ ತೈಲ, ೫೦೦ ಕೆ.ಜಿ. ಗೋಡಂಬಿ, ೫೦೦ ಕೆ.ಜಿ. ಒಣದ್ರಾಕ್ಷಿ, ೫೦೦ ಕೆ.ಜಿ. ಬಾದಾಮಿ, ೧೦೦೦ ಕೆ.ಜಿ ಡೈಮಂಡ್ ಸಕ್ಕರೆ, ೨೦೦೦, ಕೆ.ಜಿ. ಬೂರಾ ಸಕ್ಕರೆ, ೫೦ ಕೆ.ಜಿ. ಪಿಸ್ತಾ, ೫೦ ಕೆ.ಜಿ ಏಲಕ್ಕಿ, ೫೦ ಕೆ.ಜಿ. ಜಾಕಾಯಿ, ಮತ್ತು ಜಾಪತ್ರೆ ೫೦ ಕೆ.ಜಿ. ಪಚ್ಚೆ ಕರ್ಪೂರ, ೨೦೦ ಕೆ.ಜಿ. ಬಳಸಿ ತಯಾರಿಸಲಾಗಿದೆ.
ಉದ್ದೇಶ:
ಲೋಕ ಕಲ್ಯಾಣಾರ್ಥವಾಗಿ ಯಾವುದೇ ಜಾತಿ, ಮತಗಳ ಭೇದವಿಲ್ಲದೆ ಪ್ರಪಂಚದ ಎಲ್ಲೆಡೆ ಆಚರಿಸುವ ಕ್ರೈಸ್ತ ವರ್ಷಾರಂಭದ ಹಿನ್ನೆಲೆಯಲ್ಲಿ ವಿಶ್ವಶಾಂತಿ ಭ್ರಾತೃತ್ವ ಮತ್ತು ಸರ್ವಧರ್ಮ ಸಮನ್ವಯತೆಗಾಗಿ ಮತ್ತು ನಾಡಿನ ಎಲ್ಲಾ ಜನರ ಒಳಿತಿಗಾಗಿ ಪ್ರಾರ್ಥಿಸಿ.
ಈ ಲಡ್ಡು ಪ್ರಸಾದ ನಿವೇದನೆ ಮತ್ತು ಭಕ್ತಾದಿಗಳಿಗೆ ವಿನಿಯೋಗ ಕಾರ್ಯಕ್ರಮವನ್ನು ದೇವಾಲಯದ ಸಂಸ್ಥಾಪಕರಾದ ಪರಮ ಪೂಜ್ಯ ನಾಡೋಜ ಪ್ರೊ. ಭಾಷ್ಯಂ ಸ್ವಾಮೀಜಿಯವರ ದಿವ್ಯ ಸಾನಿಧ್ಯ ಮತ್ತು ನೇತೃತ್ವದಲ್ಲಿ ಹಾಗೂ ಎಲ್ಲಾ ಭಕ್ತಾದಿಗಳ ನೆರವಿನಿಂದ ಮತ್ತು ಸಂಪೂರ್ಣ ಸಹಕಾರದಿಂದ ಈ ಮಹತ್ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.
ಆಡಳಿತಾಧಿಕಾರಿ ಎನ್. ಶ್ರೀನಿವಾಸನ್``ಸುದರ್ಶನ ನಾರಸಿಂಹ ಕ್ಷೇತ್ರ``, ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನ ವಿಜಯನಗರ, ಒಂದನೇ ಹಂತ, ಮೈಸೂರು -೫೭೦೦೧೭, ಮೊಬೈಲ್ : ೦೯೯೦೦೪೦೦೦೦೦ ತಿಳಿಸಿರುತ್ತಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ