ವಿಜಯಪುರ: ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ವಿಜಯಪುರ ಇದರ ವತಿಯಿಂದ ಡಿ.8ರಂದು ವಿಜಯಪುರ ಬಸವನ ಬಾಗೇವಾಡಿಯ ಶ್ರೀ ಬಸವೇಶ್ವರರ ಜನಿಸಿದ ಸ್ಥಳದಲ್ಲಿ ನಡೆದ ವಾರ್ಷಿಕೋತ್ಸವ ಮತ್ತು ಶರಣ ಸಮ್ಮೇಳನದಲ್ಲಿ ಉಡುಪಿಯ ಸಾಮಾಜಿಕ ಕಾರ್ಯಕರ್ತ, ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು, ಕರ್ವಾಲು ರವರಿಗೆ ಬಸವಶ್ರೀ ಗೌರವ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ವಿರಕ್ತ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಹಿರೇಮಠದ ಶ್ರೀ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಹಿರಿಯ ಸಾಹಿತಿ ಸಿದ್ಧರಾಮ ಬಿರಾದಾರ್, ಕಸಾಪ ಅಧ್ಯಕ್ಷ ಶಿವಾನಂದ ಡೋನೂರ್, ಡಾ. ಪ್ರಮೀಳಾ ಪಾಟೀಲ್, ಸಂಘಟಕ ಪ್ರವೀಣ್ ಕುಮಾರ್ ಕನ್ನಾಳ ಮುಂತಾದವರಿದ್ದರು. ಈ ಸಂದರ್ಭದಲ್ಲಿ ಶೀ ಬಸವಣ್ಣರವರ ಬಗ್ಗೆ ಚಿಂತನಾ ಕಾರ್ಯಕ್ರಮ ನಡೆಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ