ಕಾಸರಗೋಡು: ಮುಳಿಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದಲ್ಲಿ ಷಷ್ಠಿ ಮಹೋತ್ಸವವು ಬ್ರಹ್ಮಶ್ರೀ ಅರವತ್ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ವೈದಿಕ ಧಾರ್ಮಿಕ ಸಾಂಸ್ಕೃತಿಕ ಸಮಾರಂಭಗಳೊಂದಿಗೆ ಪ್ರಥಮ ದಿನ ಸಂಪನ್ನವಾಯಿತು.
ಪ್ರಥಮ ದಿನ ಅಭಿಷೇಕ ಪೂಜೆ, ಉಷಃ ಪೂಜೆ, ಗಣಹೋಮ, ಕಲಶಪೂಜೆ, ಶ್ರೀ ದೇವರಿಗೆ ನವಕಾಭಿಷೇಕ, ಭಕ್ತರಿಂದ ತುಲಾಭಾರ ಸೇವೆ, ಮಧ್ಯಾಹ್ನ ಪೂಜೆ, ಪ್ರಸಾದ ಭೋಜನ ಇವು ಜರಗಿದವು.
ಬೆಳಗ್ಗೆ ವಿಧಾತ್ರಿ ಭಟ್ ಅಬ್ರಾಜೆ ಬಳಗದವರಿಂದ ಸಂಗೀತಾರ್ಚನೆ ಜರಗಿತು. ಸಹಕಲಾವಿದರಾಗಿ ಪಿಟೀಲಿನಲ್ಲಿ ಪ್ರಭಾಕರ ಕುಂಜಾರು, ಮೃದಂಗಮ್ ನಲ್ಲಿ ಶ್ರೀಧರ ಭಟ್ ಬಡಕ್ಕೇಕರೆ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಗೋವಿಂದ ಬಳ್ಳಮೂಲೆ ಸ್ವಾಗತಿಸಿ ಸುಬ್ರಹ್ಮಣ್ಯ ಭಟ್ ಅಡ್ಕ ಧನ್ಯವಾದವಿತ್ತರು. ಎನ್. ಸೀತಾರಾಮ ಬಳ್ಳುಳ್ಳಾಯ ಸಮಾರಂಭ ನಿರ್ವಹಣೆ ಮಾಡಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ