ರಾಷ್ಟ್ರೀಯ ಮಹಿಳೆಯರ ಟೆನ್ನಿಸ್ ಬಾಲ್ ಕ್ರಿಕೆಟ್ ಚಾಂಪಿಯನ್ ಶಿಪ್‌ಗೆ ಶಿವಮೊಗ್ಗದ ಸ್ಪಂದನಾ ಆಯ್ಕೆ

Upayuktha
0





ಶಿವಮೊಗ್ಗ : ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜನವರಿ 3 ರಿಂದ ನಡೆಯಲಿರುವ ರಾಷ್ಟ್ರೀಯ ಮಹಿಳೆಯರ ಟೆನ್ನಿಸ್ ಬಾಲ್ ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿರುವ ಕರ್ನಾಟಕ ರಾಜ್ಯ ಮಹಿಳೆಯರ ಟೆನ್ನಿಸ್ ಬಾಲ್ ಕ್ರಿಕೆಟ್ ತಂಡಕ್ಕೆ ಶಿವಮೊಗ್ಗದ ಗಾಡಿಕೊಪ್ಪದ ಜ್ಞಾನ ಗಂಗಾ ಶಾಲೆಯ ವಿದ್ಯಾರ್ಥಿನಿಯಾದ ಸ್ಪಂದನಾ. ಆರ್. ಗುಡಿಗಾರ ಆಯ್ಕೆಯಾಗಿದ್ದಾರೆ. 


ಮಧ್ಯಮ ವೇಗದ ಬೌಲಿಂಗ್ ಆಲ್-ರೌಂಡರ್ ಆಗಿರುವ ಸ್ಪಂದನಾಳ ಆಯ್ಕೆಯ ಬಗ್ಗೆ ಹಾಗೂ ಆಯ್ಕೆಯಾಗಿರುವ ಆಟಗಾರ್ತಿಯರ ಹೆಸರುಗಳ ತಂಡದ ಪಟ್ಟಿಯನ್ನು ರಾಜ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾದ ಡಾ. ಅಶೋಕ್ ಕುಮಾರ್ ಜಾಧವ್ ರವರು ಬಿಡುಗಡೆಗೊಳಿಸಿದ್ದಾರೆ. 


ಇದೇ ಡಿಸೆಂಬರ್ 31 ರಂದು ತಂಡವು ವಾರಣಾಸಿಗೆ ಪ್ರಯಾಣ ಬೆಳೆಸಲಿದ್ದು, ವಿದ್ಯಾರ್ಥಿನಿ ಸ್ಪಂದನಾಳ ಈ ಸಾಧನೆಗೆ ಜ್ಞಾನ ಗಂಗಾ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಯಾದ ಎಂ. ಎನ್. ದಿನೇಶ್, ಸಂಸ್ಥಾಪಕರಾದ ಬಿ. ಶೇಖರಪ್ಪ ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಕೋರಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top