ಕ್ರೀಡೆಯಿಂದ ಮಾನಸಿಕ ಆರೋಗ್ಯ ವೃದ್ಧಿ: ಡಾ|| ಚೂಂತಾರು

Upayuktha
0

ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟನಾ ಸಮಾರಂಭ



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ 2024 ಇದರ ಉದ್ಘಾಟನಾ ಸಮಾರಂಭವು ಮಂಗಳವಾರ ಮೇರಿಹಿಲ್‍ನ ಜಿಲ್ಲಾ ಗೃಹರಕ್ಷಕದಳದ ಕಛೇರಿ ಆವರಣದಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಗೃಹ ರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಕಾರ್ಯಕ್ರಮ ಉದ್ಘಾಟಿಸಿದರು. ಗೃಹರಕ್ಷಕರ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ದೈಹಿಕ ಕ್ಷಮತೆ ಅತೀ ಅಗತ್ಯ ಈ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಅತೀ ಅವಶ್ಯಕ, ಉತ್ತಮ ಆಹಾರ ಸೇವನೆಯಿಂದ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಇಂತಹ ಕ್ರೀಡಾಕೂಟಗಳಿಂದ ಮಾನಸಿಕ ಒತ್ತಡ ಕಡಿಮೆ ಆಗಿ ಮಾನಸಿಕ ಆರೋಗ್ಯ ವೃದ್ದಿಸುತ್ತದೆ ಎಂದರು.

ಆಟದಲ್ಲಿ ಸೋಲು-ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು. ಯಾವುದೇ ವೃತ್ತಿ ಅಥವಾ ಯಾವುದೇ ಕೆಲಸ ಮಾಡುವಾಗ ನಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತೀ ಅವಶ್ಯಕ. ಆರೋಗ್ಯ ಕಾಪಾಡಿಕೊಳ್ಳಲು ನಿರಂತರ ದೈಹಿಕ ಚಟುವಟಿಕೆಗಳಿಗೆ ಪೂರಕವಾದ ಕ್ರೀಡಾಕೂಟಗಳು ಅಗತ್ಯ ಎಂದು ನುಡಿದರು.


ಈ ಸಂದರ್ಭದಲ್ಲಿ ಶ್ಯಾಮಲಾ ಎ. ಪ್ರಥಮ ದರ್ಜೆ ಸಹಾಯಕಿ,  ಮಂಗಳೂರು ಘಟಕದ ಘಟಕಾಧಿಕಾರಿ ಸೀನಿಯರ್ ಪ್ಲಟೂನ್ ಕಮಾಂಡರ್ ಮಾರ್ಕ್ ಶೇರಾ, ಉಳ್ಳಾಲ ಘಟಕದ ಘಟಕಾಧಿಕಾರಿ  ಸುನಿಲ್ ಮತ್ತು ಹಿರಿಯ ಗೃಹರಕ್ಷಕ ಸುನಿಲ್ ಕುಮಾರ್ ಹಾಗೂ ಜಿಲ್ಲಾ ಗೃಹರಕ್ಷಕ ದಳದ 55 ಮಂದಿ ಗೃಹರಕ್ಷಕ/ಗೃಹರಕ್ಷಕಿಯರು ಉಪಸ್ಥಿತರಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top